Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:11 - ಕನ್ನಡ ಸತ್ಯವೇದವು J.V. (BSI)

11 ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಕರುಣಾಸಾಗರನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಗೋ, ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ, ಕರ್ತದೇವರು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ತಿಳಿದು, ಕರ್ತದೇವರು ಬಹಳ ಒಳ್ಳೆಯವರೂ ದಯಾಳುವೂ ಆಗಿದ್ದಾರೆಂದು ತಿಳಿದಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಆಯ್ಕಾ! ಸೊಸುನ್ ಘೆತಲೊ ಧನ್ಯ್, ತುಮಿ ಜೊಬಾನ್ ಸೊಸುನ್ ಘೆಟಲ್ಲ್ಯಾ ವಿಶಯಾತ್ ಆಯಿಕ್ಲ್ಯಾಶಿ ಅನಿ ಆಕ್ರಿಕ್ ಸರ್ವೆಸ್ವರ್ ದೆವಾನ್ ಕಸೆ ತೆಕಾ ದಿಲ್ಲ್ಯಾನ್ ಮನ್ತಲೆ ತುಮ್ಕಾ ಗೊತ್ತ್ ಹಾಯ್, ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ದೆವ್ ಕರಾನಾನ್‍ ಅನಿ ದಯೆನ್ ಭರಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:11
53 ತಿಳಿವುಗಳ ಹೋಲಿಕೆ  

ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;


ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ಆಗ ಯೋಬನು ಆಕೆಗೆ - ಮೂರ್ಖಳು ಮಾತಾಡಿದಂತೆ ನೀನು ಮಾತಾಡುತ್ತೀ; ದೇವರ ಹಸ್ತದಿಂದ ನಾವು ಒಳ್ಳೇದನ್ನು ಹೊಂದುತ್ತೇವಷ್ಟೆ; ಕೆಟ್ಟದ್ದನ್ನು ಹೊಂದಬಾರದೋ ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತೊಂದೂ ಅವನ ತುಟಿಗಳಿಂದ ಹೊರಡಲಿಲ್ಲ.


ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ನಿಮ್ಮ ತಂದೆ ಕರುಣವುಳ್ಳವನಾಗಿರುವ ಪ್ರಕಾರವೇ ನೀವೂ ಕರುಣವುಳ್ಳವರಾಗಿರಿ.


ನಾವು ಉಳಿದಿರುವದು ಯೆಹೋವನ ಕರುಣೆಯೇ; ಆತನ ಕೃಪಾವರಗಳು ನಿಂತುಹೋಗವು.


ಯೆಹೋವನು ಕನಿಕರವೂ ದಯೆಯೂ ದೀರ್ಘಶಾಂತಿಯೂ ಪೂರ್ಣಪ್ರೀತಿಯೂ ಉಳ್ಳವನು.


ಯೆಹೋವನು ದೀರ್ಘಶಾಂತನು, ಬಹು ಪ್ರೀತಿಯುಳ್ಳವನು, ಅಪರಾಧ ಪಾಪಗಳನ್ನು ಕ್ಷವಿುಸುವವನು; ಆದಾಗ್ಯೂ [ಅಪರಾಧಿಗಳನ್ನು] ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವನು ಎಂದು ಹೇಳಿದಿಯಲ್ಲಾ. ಈ ಮಾತಿಗೆ ದೃಷ್ಟಾಂತವನ್ನು ಕೊಟ್ಟು ನಿನ್ನ ಮಹಿಮೆಯನ್ನು ದೃಢಪಡಿಸಬೇಕು.


ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಹಸ್ತದಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ತಲತಲಾಂತರದವರೆಗೂ ಇರುವದು.


ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು ನಿಮ್ಮ ದೇವರಾದ ಯೆಹೋವನ ಕಡೆಗೆ ತಿರಿಗಿಕೊಳ್ಳಿರಿ; ಆತನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳವನಾಗಿ ಮಾಡಬೇಕೆಂದಿದ್ದ ಕೇಡಿಗೆ ಮನಮರುಗುತ್ತಾನೆ.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನೂ ಸ್ತುತ್ಯಕೃತ್ಯಗಳನ್ನೂ ಆತನು ಕನಿಕರದಿಂದಲೂ ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಆದಿಗಿಂತ ಅಂತ್ಯವು ಲೇಸು; ಹಮ್ಮುಗಾರನಿಗಿಂತ ತಾಳ್ಮೆಯುಳ್ಳವನು ಉತ್ತಮ.


ಅಭಿಮುಖನಾಗಿ ಕರುಣಿಸು; ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವದು ನಿನಗೆ ವಿಧಿಯಷ್ಟೆ.


ಯೆಹೋವನು ಕೃಪಾಳುವೂ ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.


ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.


ಯಾಹುವೇ, ನೀನು ಯಾವನನ್ನು ಶಿಕ್ಷಿಸಿ ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ಆದರೂ ಆತನು ಕರುಣಾಳುವೂ ಅಪರಾಧಿಗಳನ್ನು ಸಂಹರಿಸದೆ ಕ್ಷವಿುಸುವವನೂ ಆಗಿ ತನ್ನ ಸಿಟ್ಟನ್ನೆಲ್ಲಾ ಏರಗೊಡದೆ ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವದು.


ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ಅವನಿಗೆ ಏಳು ಮಂದಿ ಗಂಡುಮಕ್ಕಳೂ ಮೂರು ಮಂದಿ ಹೆಣ್ಣುಮಕ್ಕಳೂ ಇದ್ದರು.


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಮರೆತು ಮಾತುಕೇಳದೆ ಹಟಹಿಡಿದು ತಮಗೊಬ್ಬ ನಾಯಕನನ್ನು ನೇವಿುಸಿಕೊಂಡು ಮುಂಚಿನಂತೆ ದಾಸರಾಗಿರುವದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ನೀನಾದರೋ ಪಾಪಗಳನ್ನು ಕ್ಷವಿುಸುವವನೂ ಕನಿಕರದಯೆಗಳುಳ್ಳವನೂ ದೀರ್ಘಶಾಂತನೂ ಕೃಪಾಳುವೂ ಆಗಿರುವ ದೇವರು; ನೀನು ಅವರನ್ನು ಕೈಬಿಡಲಿಲ್ಲ.


ನೀವು ಯೆಹೋವನ ಕಡೆಗೆ ತಿರುಗಿಕೊಳ್ಳುವದಾದರೆ ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ ತಿರಿಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳವನಾಗಿರುತ್ತಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವದಿಲ್ಲ ಎಂಬದೇ.


ಕರ್ತನಾದ ನಮ್ಮ ದೇವರು ಕರುಣಿಸುವವನೂ ಕ್ಷವಿುಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ;


ಯೆಹೋವನು ದಯೆಯೂ ಕನಿಕರವೂ ಉಳ್ಳವನು; ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವದರಿಂದ ನಿನ್ನ ಮಹಾ ಕೃಪಾನುಸಾರವಾಗಿ ಅವರನ್ನು ನಾಶಮಾಡಿಬಿಡಲಿಲ್ಲ, ಕೈಬಿಡಲೂ ಇಲ್ಲ.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ನನ್ನ ಸಹೋದರರೇ, ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟುಮಾಡುತ್ತದೆಂದು ತಿಳಿದು ನೀವು ನಾನಾವಿಧವಾದ ಕಷ್ಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ಎಣಿಸಿರಿ.


ಒಂದು ವೇಳೆ ನೀತಿಯ ನಿವಿುತ್ತವೇ ಬಾಧೆಪಟ್ಟರೆ ನೀವು ಧನ್ಯರೇ.


ತಟ್ಟಿರಿ, ನಿಮಗೆ ತೆರೆಯುವದು. ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು