Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:14 - ಕನ್ನಡ ಸತ್ಯವೇದವು J.V. (BSI)

14 ನಿಮ್ಮಲ್ಲಿ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಅವನಿಗೆ ಎಣ್ಣೆಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮಲ್ಲಿ ಯಾರಾದರೂ ಅಸ್ವಸ್ಥರಾಗಿದ್ದರೆ, ಅವನು ಸಭಾಪಾಲಕರನ್ನು ಕರೆಸಲಿ. ಅವರು ಅವನಿಗಾಗಿ ದೇವರನ್ನು ಪ್ರಾರ್ಥಿಸಿ ಪ್ರಭುವಿನ ಹೆಸರಿನಲ್ಲಿ ಅವನನ್ನು ಅಭ್ಯಂಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮಲ್ಲಿ ಕಾಯಿಲೆಯಾಗಿರುವವನು ಸಭಾಹಿರಿಯರನ್ನು ಕರೆಯಿಸಬೇಕು. ಹಿರಿಯರು ಅವನಿಗೆ ಎಣ್ಣೆಯನ್ನು ಹಚ್ಚಿ, ಪ್ರಭುವಿನ ಹೆಸರಿನಲ್ಲಿ ಅವನಿಗೋಸ್ಕರ ಪ್ರಾರ್ಥಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮ್ಚ್ಯಾತ್ಲೆ ಕೊನ್‌ಬಿ ಶಿಕ್ ಹಾಯ್ ಹೊಲ್ಯಾರ್ ತೆನಿ ತಾಂಡ್ಯಾಚ್ಯಾ ಜಾನ್ತ್ಯಾಕ್ನಿ ಬಲ್ವುಚೆ ಅನಿ ಜಾಂನ್ತ್ಯಾನಿ ಧನಿಯಾಚ್ಯಾ ನಾವಾನ್ ತೆಲ್ ಲಾವುನ್ ಶಿಕ್ ಹೊತ್ತ್ಯಾಂಚ್ಯಾ ಸಾಟ್ನಿ ಮಾಗ್ನಿ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:14
11 ತಿಳಿವುಗಳ ಹೋಲಿಕೆ  

ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆಹಚ್ಚಿ ವಾಸಿಮಾಡಿದರು.


ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಪೀಡಿತನಾಗಿ ಮಲಗಿದ್ದನು. ಪೌಲನು ಅವನ ಬಳಿಗೆ ಹೋಗಿ ದೇವರ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ವಾಸಿಮಾಡಿದನು.


ವಿಷಪದಾರ್ಥವನ್ನೇನಾದರೂ ಕುಡಿದರೂ ಅವರಿಗೆ ಯಾವ ಕೇಡೂ ಆಗುವದಿಲ್ಲ; ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಗುಣವಾಗುವದು ಎಂದು ಹೇಳಿದನು.


ನಾಮಾನನು ಇದನ್ನು ಕೇಳಿ ಕೋಪಗೊಂಡು - ಇದೇನು! ಅವನು ಹೇಗೂ ಹೊರಗೆ ಬಂದು ನಿಂತು ತನ್ನ ದೇವರಾದ ಯೆಹೋವನ ಹೆಸರು ಹೇಳಿ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.


ನೀನು ಕ್ರೇತದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ ಪಟ್ಟಣಪಟ್ಟಣಗಳಲ್ಲೂ ಸಭೆಯ ಹಿರಿಯರನ್ನು ನೇವಿುಸಬೇಕೆಂದು ನಾನು ನಿನಗೆ ಅಪ್ಪಣೆ ಕೊಟ್ಟು ನಿನ್ನನ್ನು ಅಲ್ಲೇ ಬಿಟ್ಟು ಬಂದೆನಲ್ಲಾ.


ಅವರು ಯೆರೂಸಲೇವಿುಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ತಿಳಿಸಿದರು.


ಇದಲ್ಲದೆ ಪ್ರತಿಸಭೆಯಲ್ಲಿ ಸಭೆಯವರ ಸಮ್ಮತಿಯಿಂದ ಹಿರಿಯರನ್ನು ಗೊತ್ತು ಮಾಡಿ ನೇವಿುಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.


ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು - ತಬಿಥಾ, ಏಳು ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.


ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.


ಹುಡುಗನ ಮೇಲೆ ಮೂರು ಸಾರಿ ಬೋರ್ಲಬಿದ್ದು - ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರಿಗಿ ಬರುವಂತೆ ಮಾಡು ಎಂಬದಾಗಿ ಆತನಿಗೆ ಮೊರೆಯಿಟ್ಟನು.


ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು