Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:17 - ಕನ್ನಡ ಸತ್ಯವೇದವು J.V. (BSI)

17 ಎಲೀಯನು ನಮ್ಮಂಥ ಸ್ವಭಾವವುಳ್ಳವನಾಗಿದ್ದನು; ಅವನು ಮಳೆಬರಬಾರದೆಂದು ಬಹಳವಾಗಿ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳವರೆಗೂ ಮಳೆಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಲೀಯನು ನಮ್ಮಂಥ ಸಾಧಾರಣ ಮನುಷ್ಯ. ಆದರೂ ಅವನು ಮಳೆ ಬಾರದಿರಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದರಿಂದ ಮೂರು ವರ್ಷ ಆರು ತಿಂಗಳವರೆಗೂ ಮಳೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಲೀಯನು ಸಹ ನಮ್ಮಂತೆಯೇ ಒಬ್ಬ ಮನುಷ್ಯನಾಗಿದ್ದನು. ಮಳೆ ಬಾರದಂತೆ ಅವನು ಪ್ರಾರ್ಥಿಸಿದಾಗ ಮೂರುವರೆ ವರ್ಷಗಳವರೆಗೆ ಆ ನಾಡಿನಲ್ಲಿ ಮಳೆಯೇ ಬೀಳಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಎಲಿಯಾ ಅಮ್ಚ್ಯಾ ಸಾರ್ಕೊಚ್ ಎಕ್ ಮಾನುಸ್ ಹೊತ್ತೊ ತೆನಿ ಭಕ್ತಿನ್ ಪಾವ್ಸ್ ಯವ್ಚೆ ನ್ಹಯ್ ಮನುನ್ ಮಾಗ್ನಿ ಕರ್ಲ್ಯಾನ್, ಸಾಡೆ ತಿನ್ ವರ್ಸಾ ತ್ಯಾ ಗಾಂವಾತ್ ಪಾವ್ಸುಚ್ ಪಡುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:17
7 ತಿಳಿವುಗಳ ಹೋಲಿಕೆ  

ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು.


ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರುಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲ್ ಜನರಲ್ಲಿ ಎಷ್ಟೋ ಮಂದಿ ವಿಧವೆಯರು ಇದ್ದದ್ದು ನಿಜ;


ಇವರಿಗೆ ಯಾವನಾದರೂ ಕೇಡನ್ನು ಉಂಟುಮಾಡಬೇಕೆಂದಿದ್ದರೆ ಅವನಿಗೆ ಈ ರೀತಿಯಾಗಿ ಕೊಲೆಯಾಗಬೇಕು. ತಾವು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂವಿುಯನ್ನು ಪೀಡಿಸುವದಕ್ಕೂ ಅಧಿಕಾರವುಂಟು.


ಅನೇಕ ದಿವಸಗಳಾದನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರುಷದಲ್ಲಿ ಆತನು ಅವನಿಗೆ - ನೀನು ಹೋಗಿ ಅಹಾಬನನ್ನು ಕಾಣು; ನಾನು ದೇಶಕ್ಕೆ ಮಳೆ ಕೊಡುತ್ತೇನೆ ಅಂದನು.


ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಆದರೆ ಪೇತ್ರನು - ಏಳಪ್ಪಾ, ನಾನೂ ಮನುಷ್ಯನು ಎಂದು ಹೇಳಿ


ದೇವರು ತಾನು ಮುಂದಾಗಿ ತನ್ನ ಜನರಾಗುವದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಯನ್ನು ತಳ್ಳಿ ಬಿಡಲಿಲ್ಲ. ಎಲೀಯನ ಚರಿತ್ರೆಯಲ್ಲಿ ಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು