Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:7 - ಕನ್ನಡ ಸತ್ಯವೇದವು J.V. (BSI)

7 ಸಹೋದರರೇ, ಕರ್ತನು ಪ್ರತ್ಯಕ್ಷನಾಗುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂವಿುಯ ಬೆಲೆಯುಳ್ಳ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಹೋದರ ಸಹೋದರಿಯರೇ, ತಾಳ್ಮೆಯಿಂದಿರಿ, ಪ್ರಭುವಾದ ಯೇಸು ಪ್ರತ್ಯಕ್ಷನಾಗುತ್ತಾನೆ. ಆದ್ದರಿಂದ ಅಲ್ಲಿಯವರೆಗೆ ತಾಳ್ಮೆಯಿಂದಿರಿ. ತನ್ನ ಅಮೂಲ್ಯ ಬೆಳೆಯು ಭೂಮಿಯಿಂದ ಬರುವ ತನಕ ರೈತನು ತಾಳ್ಮೆಯಿಂದ ಕಾಯುತ್ತಾನೆ. ಮೊದಲ ಹಾಗೂ ಕೊನೆಯ ಮಳೆಯು ತನ್ನ ಬೆಳೆಯ ಮೇಲೆ ಸುರಿಯುವ ತನಕ ರೈತನು ತಾಳ್ಮೆಯಿಂದ ಕಾದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಸೆ ರ್‍ಹಾತಾನಾ ಮಾಜ್ಯಾ ಭಾವಾನು ಅನಿ ಭೆನಿಯಾನು, ಧನಿ ಯೆಯ್ ಪತರ್ ಗಮ್ಮ್ ಧರುನ್ ಘೆವ್ನ್ ರ್‍ಹಾವಾ, ಎಕ್ ಸೆತ್ಕಾರಿ ಅಪ್ನಾಚ್ಯಾ ಶೆತಾತ್ಲ್ಯಾ ಪಿಕ್ಕಾಕ್ ಕಸೆ ರಾಕುನ್ ರ್‍ಹಾತಾ ತೆ ಬಗಾ, ತೊ ಶಾಂತ್ಪಾನಾನಿ ಗಮ್ ಧರುನ್ ಘೆವ್ನ್ ಸಮಾದಾನಾನಿ ಪೈಲೆಚೊ ಅನಿ ಆಕ್ರಿಚೊ ಪಾವ್ಸ್ ಯೆಯ್‍ ಪತರ್ ಅಪ್ನಾಚ್ಯಾ ಫೈರಾಸಾಟ್ನಿ ರಾಕುನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:7
32 ತಿಳಿವುಗಳ ಹೋಲಿಕೆ  

ಚೀಯೋನಿನ ಸಂತತಿಯವರೇ, ನಿಮ್ಮ ದೇವರಾದ ಯೆಹೋವನಲ್ಲಿ ಹರ್ಷಿಸಿರಿ, ಉಲ್ಲಾಸಿಸಿರಿ; ಆತನು ಮುಂಗಾರನ್ನು ತಕ್ಕ ಹಾಗೆ ನಿಮಗೆ ಕೊಡುವನು; ಮುಂಗಾರು ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ನಿಮಗೆ ಗೋದಿ, ದ್ರಾಕ್ಷೆ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂವಿುಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಸರಿಯಾಗಿ ನಡಿಸುವನು;


ಆತನ ಮಹಿಮಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷ್ಠರಾಗಿ ಆನಂದಪೂರ್ವಕವಾದ ತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಯಾವಾಗಲೂ ತೋರಿಸುವವರಾಗಿರಬೇಕೆಂತಲೂ


ಆ ವಾಗ್ದಾನದ ಫಲಕ್ಕೋಸ್ಕರ ಅಬ್ರಹಾಮನು ಬಹು ದಿವಸ ಕಾದುಕೊಂಡಿದ್ದು ಆ ಫಲವನ್ನು ದೇವರು ಹೇಳಿದ ಹಾಗೆಯೇ ಹೊಂದಿದನು.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ನಾವೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವದೆಂದು ಎದುರುನೋಡುತ್ತೇವೆ.


ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ ಸುಗ್ಗಿಯ ಕ್ಲುಪ್ತವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ ಎಂದು ಮನದಲ್ಲಿ ಅಂದುಕೊಳ್ಳುವದಿಲ್ಲ.


ನಮ್ಮ ಕರ್ತನಾದ ಯೇಸು ಪ್ರತ್ಯಕ್ಷನಾಗುವಾಗ ಆತನ ಮುಂದೆ ನಮ್ಮ ಭರವಸವೂ ನಮ್ಮ ಸಂತೋಷವೂ ನಾವು ಹೊಗಳಿಕೊಳ್ಳುವ ಜಯಮಾಲೆಯೂ ಯಾರು? ನೀವೇ ಅಲ್ಲವೇ.


ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.


ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು].


ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.


ಹೇಗೆ ವಿುಂಚು ಮೂಡಣದಲ್ಲಿ ಹುಟ್ಟಿ ಪಡುವಣದವರೆಗೂ ಕಾಣಿಸುತ್ತದೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯು ಇರುವದು.


ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.


ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ವಿುಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.


ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ನಿದ್ರೆ ಹೊಂದಿದ ದಿನ ಮೊದಲುಗೊಂಡು ಸಮಸ್ತವೂ ಲೋಕಾದಿಯಿಂದಿದ್ದ ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳಬೇಕು.


ಹೀಗೆ ನೀವು ಯಾವ ಕೃಪಾವರದಲ್ಲಿಯೂ ಕೊರತೆಯಿಲ್ಲದವರಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇದ್ದೀರಿ.


ಆಗ ಮನುಷ್ಯಕುಮಾರನು ಬಲದಿಂದಲೂ ಬಹುಮಹಿಮೆಯಿಂದಲೂ ಮೇಘದಲ್ಲಿ ಬರುವದನ್ನು ಕಾಣುವರು.


ಹೀಗಿದ್ದರೂ ಮನುಷ್ಯಕುಮಾರನು ಬಂದಾಗ ಭೂವಿುಯ ಮೇಲೆ ನಂಬಿಕೆಯನ್ನು ಕಾಣುವನೋ? ಅಂದನು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.


ಯೇಸು ಅವನಿಗೆ - ನಾನು ಬರುವ ತನಕ ಇವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಇದರ ದೆಸೆಯಿಂದ ಆ ಶಿಷ್ಯನು ಸಾಯುವದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಆತನು ಹೇಳಿದನು.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪುಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದ ಹಾಗಾಗುವದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.


ಆ ಮಣ್ಣೇ ನಿಮಗೆ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ನುಂಗಿಬಿಡುವದು. ಅಂತ್ಯದಿವಸಗಳು ಬಂದರೂ ದ್ರವ್ಯವನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.


ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು