Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:13 - ಕನ್ನಡ ಸತ್ಯವೇದವು J.V. (BSI)

13 ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆಸಿದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟು ಮಾಡುವ ಸರ್ವಾಂಗಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಈ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:13
15 ತಿಳಿವುಗಳ ಹೋಲಿಕೆ  

ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ನೀವು ಯೆಹೋವನಿಗೆ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಯೆಹೋವನಿಗೆ ಹೋಮ ಮಾಡಕೂಡದು.


ಸಮಾಧಾನಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.


ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಪಾನದ್ರವ್ಯಕ್ಕಾಗಿ


ಅಮಾವಾಸ್ಯೆಯಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.


ಸರ್ವಾಂಗಹೋಮಗಳನ್ನು ಸಮರ್ಪಿಸುವಾಗ ರಕ್ತಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು.


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಸೂಚಿಸುವದಕ್ಕಾಗಿ ಆ ಎಣ್ಣೆ ಬೆರಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನೂ ಧೂಪವೆಲ್ಲವನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದು.


ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ್ರವ್ಯದ ಮೇಲೆಯೇ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮವಾಗಿರುವದು.


ಧಾನ್ಯನೈವೇದ್ಯ ವಿಷಯವಾದ ನಿಯಮಗಳು. ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳಿಸಿ ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮವಾಗಿತ್ತು.


ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕಾಗಿ ದನಗಳಲ್ಲಾಗಲಿ ಆಡುಕುರಿಗಳಲ್ಲಾಗಲಿ ಒಂದು ಪಶುವನ್ನು ಹೋಮಮಾಡುವವನು ಸರ್ವಾಂಗ ಹೋಮಮಾಡಿದರೂ ಸರಿಯೇ, ಹರಕೆ ಸಲ್ಲಿಸುವದಕ್ಕೋ ಕೃತಜ್ಞತೆಯನ್ನು ತೋರಿಸುವದಕ್ಕೋ ಹಬ್ಬವನ್ನು ಆಚರಿಸುವದಕ್ಕೋ ಸಮಾಧಾನಯಜ್ಞ ಮಾಡಿದರೂ ಸರಿಯೇ,


ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವದು.


ಇದಲ್ಲದೆ ಅವನು ಹತ್ತು ಗಂಗಾಳಗಳನ್ನು ಮಾಡಿಸಿ ಸರ್ವಾಂಗಹೋಮಸಮರ್ಪಣೆಯ ಸಾಮಾನು ತೊಳೆದು ಶುದ್ಧಮಾಡುವದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಸಮುದ್ರವೆನಿಸಿಕೊಳ್ಳುವ ಪಾತ್ರೆಯು ಯಾಜಕರ ಸ್ನಾನಕ್ಕಾಗಿ ಇತ್ತು.


ಹೆಬ್ಬಾಗಿಲ ನಿಲವುಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ ಅದರ ದ್ವಾರವೂ ಕಾಣಿಸಿದವು; ಆ ಕೋಣೆಯೊಳಗೆ ಸರ್ವಾಂಗಹೋಮಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು