Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:5 - ಕನ್ನಡ ಸತ್ಯವೇದವು J.V. (BSI)

5 ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿರುವ ಯಜ್ಞವೇದಿಗೆ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಅದನ್ನು ಸರ್ವೇಶ್ವರನ ಎದುರಿನಲ್ಲಿ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:5
25 ತಿಳಿವುಗಳ ಹೋಲಿಕೆ  

ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.


ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರಕಡೆ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.


ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು;


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.


ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.


ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚೆಲ್ಲಬೇಕು.


ಇದಲ್ಲದೆ ಆ ಯಾಜಕರೆಲ್ಲರು ದಿನಾಲು ಸೇವೆಮಾಡುತ್ತಾ ಎಂದಿಗೂ ಪಾಪನಿವಾರಣೆ ಮಾಡಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇಪದೇ ಸಮರ್ಪಿಸುತ್ತಾ ನಿಂತುಕೊಂಡಿರುವರು.


ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ, ಯಾವದನ್ನರ್ಪಿಸಿ ಮಹೋನ್ನತದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನೂ ಒಂದು ವರುಷದ ಕರುಗಳನ್ನೂ ತೆಗೆದುಕೊಂಡುಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವದರಿಂದ ಅವುಗಳನ್ನು ಬಿಡಕೂಡದು; ಅವುಗಳ ರಕ್ತವನ್ನು ಯಜ್ಞವೇದಿಗೆ ಎರಚಿ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.


ತರುವಾಯ ಅವನು ಜನರಿಗೋಸ್ಕರವಾದ ದೋಷಪರಿಹಾರಕಯಜ್ಞದ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿವಿುಕಿಸಬೇಕು.


ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಕುತ್ತಿಗೆ ಮುರಿದು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹಿಂಡಬೇಕು;


ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು.


ಅವನು ಅದರ ತಲೆಯ ಮೇಲೆ ಕೈಯಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.


ಅವನು ಅದರ ತಲೆಯ ಮೇಲೆ ಕೈಯಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಧಳದಲ್ಲೇ ಅದನ್ನು ದೋಷಪರಿಹಾರಾರ್ಥವಾಗಿ ವಧಿಸಬೇಕು.


ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದಷ್ಟೆ.


ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ತಂದರು.


ಆಗ ಆ ಪುರುಷನು ನನಗೆ ಹೀಗೆ ಹೇಳಿದನು - ನರಪುತ್ರನೇ, ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಸರ್ವಾಂಗಹೋಮಕ್ಕೂ ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಕೊಳ್ಳಬೇಕು -


ದೇವದರ್ಶನದ ಗುಡಾರದ ಬಾಗಲಿನ ಮುಂದುಗಡೆಯಲ್ಲಿ ಯಜ್ಞವೇದಿಯನ್ನು ಇಡಬೇಕು.


ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ ಹೋರಿಯ ವಿುಕ್ಕ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು