Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:1 - ಕನ್ನಡ ಸತ್ಯವೇದವು J.V. (BSI)

1 ಆರೋನನ ಮಕ್ಕಳಲ್ಲಿ ನಾದಾಬ್ ಅಬೀಹು ಎಂಬಿಬ್ಬರು ತಮ್ಮತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆರೋನನ ಮಕ್ಕಳಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ತಮ್ಮ ತಮ್ಮ ಧೂಪ ಕಳಸಗಳಲ್ಲಿ ಸರ್ವೇಶ್ವರ ಸ್ವಾಮಿ ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ ಆರೋನನ ಪುತ್ರರಲ್ಲಿ ನಾದಾಬ ಮತ್ತು ಅಬೀಹು ಎಂಬಿಬ್ಬರು ಧೂಪ ಹಾಕಲು ಒಂದೊಂದು ಬಟ್ಟಲನ್ನು ತೆಗೆದುಕೊಂಡು ಅದರಲ್ಲಿ ಬೇರೆ ಬೆಂಕಿಯನ್ನಿಟ್ಟು ಯೆಹೋವನ ಮುಂದೆ ಧೂಪಹಾಕಿದರು. ಯೆಹೋವನ ಆಜ್ಞೆಗನುಸಾರವಾದ ಬೆಂಕಿಯನ್ನು ಅವರು ಉಪಯೋಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆರೋನನ ಪುತ್ರರಾದ ನಾದಾಬ್ ಮತ್ತು ಅಬೀಹೂ ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು, ಅದರಲ್ಲಿ ಬೆಂಕಿಯನ್ನು ಹಾಕಿ, ಅದರಲ್ಲಿ ಸುವಾಸನೆಯ ಧೂಪವನ್ನು ಹಾಕಿ, ಯೆಹೋವ ದೇವರು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:1
38 ತಿಳಿವುಗಳ ಹೋಲಿಕೆ  

ನಾದಬ್ ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದದರಿಂದ ಸತ್ತು ಹೋದರು.


ಅವನು ತನಗೋಸ್ಕರವಾದ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಯಿತು; ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು ಎಂದು ಹೇಳಿದನು.


ಯೆಹೋವನು ಮೋಶೆಗೆ - ನೀನೂ ಆರೋನ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬೀಳಬೇಕು.


ಆರೋನನು ಅಮ್ಮೀನಾದಾಬನ ಮಗಳಾಗಿಯೂ ನಹಶೋನನ ತಂಗಿಯಾಗಿಯೂ ಇರುವ ಎಲೀಶೇಬಳನ್ನು ಮದುವೆ ಮಾಡಿಕೊಂಡನು; ಆಕೆಯಲ್ಲಿ ಅವನಿಗೆ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರು ಹುಟ್ಟಿದರು.


ನನ್ನ ಪ್ರಾರ್ಥನೆಯು ಧೂಪದಂತೆಯೂ ನಾನು ಕೈಯೆತ್ತುವದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ಇದಲ್ಲದೆ ನನಗೆ ಯಾಜಕಸೇವೆ ಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ಯರಲ್ಲಿಂದ ನಿನ್ನ ಹತ್ತಿರಕ್ಕೆ ಕರಿಸಬೇಕು.


ಮೋಶೆ ಆರೋನ್ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಬೆಟ್ಟವನ್ನು ಹತ್ತಿದರು;


ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ


ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಅದರಲ್ಲಿರುವ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು; ಸಲಿಕೆಗಳನ್ನೂ ಬೋಗುಣಿಗಳನ್ನೂ ಮುಳ್ಳುಗಳನ್ನೂ ಅಗ್ಗಿಷ್ಟಿಗೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;


ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಐಗುಪ್ತದಲ್ಲಿಯೂ ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು -


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ತಮ್ಮ ಗಂಡು ಹೆಣ್ಣುಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿಕೊಡುವದಕ್ಕೆ ಬೆನ್‍ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ.


ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿಕೊಡುವದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ; ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ. ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ;


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಡುವದಕ್ಕೆ ಬೆನ್‍ಹಿನ್ನೋಮ್ ತಗ್ಗಿನಲ್ಲಿನ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ; ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.


ಅನ್ಯದೇವರುಗಳನ್ನಾಗಲಿ ಇಲ್ಲವೆ ಪೂಜಿಸಬಾರದೆಂದು ಆತನು ನಿಷೇಧಿಸಿರುವ ಸೂರ್ಯಚಂದ್ರನಕ್ಷತ್ರಗಳನ್ನಾಗಲಿ ಸೇವಿಸಿ ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದುಷ್ಟವಾದದ್ದನ್ನು ನಡಿಸಿದರೆ


ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು.


ವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು, ಅಗ್ಗಿಷ್ಟಿಗೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.


ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳ ದ್ರವ್ಯಗಳಿಂದುಂಟಾದ ಸ್ವಚ್ಫವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಮಾಡಿದನು.


ಪಟ್ಟಾಭಿಷೇಕತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.


ಕೂಡಲೆ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ ಕಟ್ಟಿಗೆಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ನಾವು ಅರಣ್ಯದಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು ಅಂದನು.


ಕೆಹಾತ್ಯರ ಗೋತ್ರ ಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವದಕ್ಕೆ ಆಸ್ಪದಕೊಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು