Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:42 - ಕನ್ನಡ ಸತ್ಯವೇದವು J.V. (BSI)

42 ಹೊಟ್ಟೆಯಿಂದ ನಡೆಯುವಂಥದನ್ನೂ ಕಾಲಿನಿಂದ ಹರಿದಾಡುವಂಥದನ್ನೂ ಬಹಳ ಕಾಲುಳ್ಳದ್ದನ್ನೂ ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನೂ ನೀವು ತಿನ್ನಬಾರದು; ಅವು ಹೇಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಹೊಟ್ಟೆಯಿಂದ ನಡೆಯುವಂಥದನ್ನೂ ಕಾಲಿನಿಂದ ಹರಿದಾಡುವಂಥದನ್ನೂ ಬಹಳ ಕಾಲುಳ್ಳದ್ದನ್ನೂ ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನೂ ನೀವು ತಿನ್ನಬಾರದು; ಅವು ಹೇಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಹೊಟ್ಟೆಯ ಮೇಲೆ ತೆವಳಿಕೊಂಡು ಹೋಗುವ ಜಂತುವನ್ನು ಅಥವಾ ತನ್ನ ನಾಲ್ಕು ಕಾಲುಗಳಲ್ಲಿ ನಡೆಯುವ ಜಂತುವನ್ನು ಅಥವಾ ಅನೇಕ ಕಾಲುಗಳುಳ್ಳ ಜಂತುಗಳನ್ನು ನೀವು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಹೊಟ್ಟೆಯಿಂದ ಹರಿದಾಡುವ ಯಾವುದನ್ನೂ, ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವುದನ್ನೂ, ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವುದನ್ನು ನೀವು ತಿನ್ನಬಾರದು. ಏಕೆಂದರೆ ಅವು ಹೇಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:42
12 ತಿಳಿವುಗಳ ಹೋಲಿಕೆ  

ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಸೋಮಾರಿಗಳಾದ ಹೊಟ್ಟೇಬಾಕರೂ ಆಗಿದ್ದಾರೆಂದು ಅವರಲ್ಲಿಯೇ ಹುಟ್ಟಿದ ಒಬ್ಬ ಪ್ರವಾದಿಯು ಹೇಳಿದನು. ಈ ಸಾಕ್ಷಿಯು ನಿಜವೇ.


ಆದರೆ ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವದಕ್ಕೆ ವೇಷ ಹಾಕಿಕೊಳ್ಳುವವರೂ ಆಗಿದ್ದಾರೆ.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಮರುಗ ಸೋಪು ಜೀರಿಗೆಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಗೌರವವಾದದ್ದನ್ನು, ಅಂದರೆ ನ್ಯಾಯವನ್ನೂ ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿರಿ. ಇವುಗಳನ್ನು ಮಾಡಬೇಕಾಗಿತ್ತು; ಅವುಗಳನ್ನೂ ಬಿಡಬಾರದು.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ಹಾವಿನಂತೆ ದೂಳನ್ನು ನೆಕ್ಕುವರು; ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು; ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ ಸಮೀಪಿಸಿ ನಿನಗೆ ಭಯಪಡುವರು.


ತೋಳವು ಕುರಿಯ ಸಂಗಡ ಮೇಯುವದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವದು. ಹಾವಿಗೆ ದೂಳೇ ಆಹಾರವಾಗುವದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡುಮಾಡುವದಿಲ್ಲ, ಯಾರೂ ಹಾಳುಮಾಡುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.


ತರುವಾಯ ದೇವರು - ಗುಂಪುಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಅಂತರಿಕ್ಷದೊಳಗೆ ಹಾರಾಡಲಿ ಎಂದು ಹೇಳಿದನು.


ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳೆಲ್ಲಾ ಹೇಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.


ನೀವು ಅಂಥ ಯಾವ ಸಣ್ಣ ಜೀವಿಯನ್ನೂ ತಿಂದು ನಿಮ್ಮನ್ನು ನೀವೇ ಹೇಸಿಕೆ ಮಾಡಿಕೊಂಡು ಅಶುದ್ಧರಾಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು