Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:20 - ಕನ್ನಡ ಸತ್ಯವೇದವು J.V. (BSI)

20 ಯಾಜಕನು ನೋಡುವಾಗ ಆ ಕಲೆ ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠಹುಟ್ಟಿದದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾಜಕನು ಪರೀಕ್ಷಿಸಿ ನೋಡುವಾಗ ಆ ಕಲೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠಹುಟ್ಟಿರುವುದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯಾಜಕನು ಅದನ್ನು ಪರೀಕ್ಷಿಸಬೇಕು. ಅದು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರ ಮೇಲಿರುವ ರೋಮವು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಆ ಕಲೆಯು ಕುಷ್ಠದ ಸೋಂಕಾಗಿದೆ. ಹುಣ್ಣಿನಿಂದ ಕುಷ್ಠ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯಾಜಕನು ಅದನ್ನು ಪರೀಕ್ಷಿಸಿದಾಗ, ಅದು ಚರ್ಮದಿಂದ ಕೆಳಗೆ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು. ಅದು ಹುಣ್ಣಿನಿಂದ ಒಡೆದುಹೋದ ಚರ್ಮರೋಗವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:20
7 ತಿಳಿವುಗಳ ಹೋಲಿಕೆ  

ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.


ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು - ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪಮಾಡಬೇಡ; ನಿನಗೆ ಹೆಚ್ಚಿನ ಕೇಡು ಬಂದೀತು ಅಂದನು.


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.


ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ನೋಡುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಮಚ್ಚೆ ವಿುಕ್ಕ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.


ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರಕೊಂಡು ಬರಬೇಕು.


ಅದು ಇದ್ದ ಸ್ಥಳದಲ್ಲಿ ಬಿಳೀ ಬಾವಾಗಲಿ ಕೆಂಪು ಬಿಳುಪು ವಿುಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು.


ಆದರೆ ಯಾಜಕನು ನೋಡುವಾಗ ಅದರಲ್ಲಿ ಬಿಳೀ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ವಿುಕ್ಕ ಚರ್ಮಕ್ಕಿಂತ ತಗ್ಗಾಗದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು