Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:45 - ಕನ್ನಡ ಸತ್ಯವೇದವು J.V. (BSI)

45 ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ನಾನು ಅಶುದ್ಧನು ಅಶುದ್ಧನು ಎಂದು ಕೂಗಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 “ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ‘ನಾನು ಅಶುದ್ದನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ಒಬ್ಬನಿಗೆ ಕುಷ್ಠರೋಗವಿದ್ದರೆ, ಅವನು ಬೇರೆ ಜನರಿಗೆ ಎಚ್ಚರಿಕೆ ಕೊಡಬೇಕು. ‘ನಾನು ಅಶುದ್ಧನು, ಅಶುದ್ಧನು’ ಎಂದು ಅವನು ಕೂಗಿಕೊಳ್ಳಬೇಕು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ಹರಿದುಕೊಂಡಿರಬೇಕು; ತನ್ನ ಕೂದಲನ್ನು ಕೆದರಿಕೊಂಡಿರಬೇಕು; ತನ್ನ ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 “ಚರ್ಮರೋಗ ಇರುವ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡವನಾಗಿ, ತಲೆಗೂದಲನ್ನು ಕೆದರಿಕೊಂಡು, ಮುಖದ ಕೆಳಭಾಗವನ್ನು ಮುಚ್ಚಿಕೊಂಡು, ‘ನಾನು ಅಶುದ್ಧನು, ಅಶುದ್ಧನು,’ ಎಂದು ಕೂಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:45
24 ತಿಳಿವುಗಳ ಹೋಲಿಕೆ  

ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೆಗೊಳ್ಳುವರು, ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು; ಅವರಿಗೆ ದೈವೋತ್ತರವೇ ದೊರೆಯದು.


ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರಿಗೂ - ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸತ್ತೀರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾದೀತು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲ್ಯರ ಮನೆತನದವರೇ ದುಃಖಿಸಲಿ.


ವಿಯೋಗದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.


ಅವರನ್ನು ನೋಡುವವರು - ತೊಲಗಿರಿ, ಅಶುದ್ಧರು ನೀವು, ನಡೆಯಿರಿ, ನಡೆಯಿರಿ, ಮುಟ್ಟಬೇಡಿರಿ ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು - ಇವರು ಇನ್ನು ಇಲ್ಲಿ ತಂಗಬಾರದು ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.


ಒಂದು ಹಳ್ಳಿಗೆ ಬಂದಾಗ ಹತ್ತು ಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು -


ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ ಗಾರಿಗೆಯನ್ನು ತಿನ್ನದೆ


ಯಾಜಕರಲ್ಲಿ ಪ್ರಧಾನನು ಅಂದರೆ ಯಾವನು ತೈಲಾಭಿಷೇಕಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ ಪಟ್ಟಕ್ಕೆ ಬರುವನೋ ಅವನು [ದುಃಖಸೂಚನೆಗಾಗಿ] ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು ನಿಮ್ಮ ದೇವರಾದ ಯೆಹೋವನ ಕಡೆಗೆ ತಿರಿಗಿಕೊಳ್ಳಿರಿ; ಆತನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳವನಾಗಿ ಮಾಡಬೇಕೆಂದಿದ್ದ ಕೇಡಿಗೆ ಮನಮರುಗುತ್ತಾನೆ.


ಅರಸನಾಗಲಿ ಸುರಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.


ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ; ನಮ್ಮ ದೇವರಾದ ಯೆಹೋವನಿಗೆ ನಾವೂ ನಮ್ಮ ಪಿತೃಗಳೂ ನಮ್ಮ ಚಿಕ್ಕತನದಿಂದ ಈಗಿನವರೆಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ ಎಂದು ಮೊರೆಯಿಡುತ್ತಾರೆ.


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು ತಲೆಬೋಳಿಸಿಕೊಂಡು ನೆಲದಲ್ಲಿ ಅಡ್ಡಬಿದ್ದು ನಮಸ್ಕರಿಸಿ


ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.


ರೂಬೇನನು ತಿರಿಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನಿಲ್ಲದ್ದನ್ನು ಕಂಡು


ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.


ಊರುಬಾಗಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ - ನಾವು ಸಾಯುವ ತನಕ ಇಲ್ಲೇ ಕೂತಿರಬೇಕೋ?


ಎಲ್ಲಾ ಕುಷ್ಠರೋಗಿಗಳನ್ನೂ ಮೇಹಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು