Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:10 - ಕನ್ನಡ ಸತ್ಯವೇದವು J.V. (BSI)

10 ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೇ ಕಲಸಿದ ಒಂಭತ್ತು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಎಂಟನೆಯ ದಿನದಲ್ಲಿ ಅವನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ಒಂದು ವರ್ಷದ ಹೆಣ್ಣು ಕುರಿಮರಿಯನ್ನೂ ಎಣ್ಣೆ ಬೆರೆಸಿದ ಇಪ್ಪತ್ತನಾಲ್ಕು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನೂ ತೆಗೆದುಕೊಂಡು ಬರಬೇಕು. ಈ ಶ್ರೇಷ್ಠ ಗೋಧಿಹಿಟ್ಟು ಧಾನ್ಯನೈವೇದ್ಯಕ್ಕಾಗಿರುತ್ತದೆ. ಅವನು ಒಂದು ಸೇರು ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಎಂಟನೆಯ ದಿವಸದಲ್ಲಿ ಅವನು ಕಳಂಕರಹಿತವಾದ ಎರಡು ಕುರಿಮರಿಗಳನ್ನು ಮತ್ತು ಒಂದು ವರುಷದ ಕಳಂಕರಹಿತವಾದ ಹೆಣ್ಣು ಕುರಿಯನ್ನು, ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು, ಒಂದನೆಯ ಮೂರು ಭಾಗ ಎಣ್ಣೆಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:10
26 ತಿಳಿವುಗಳ ಹೋಲಿಕೆ  

ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು


ಆಗ ಆತನು ಅವನಿಗೆ - ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕ ಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಅಪ್ಪಣೆಕೊಟ್ಟನು.


ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಅವನು ಅಷ್ಟನ್ನು ಸಮರ್ಪಿಸುವದಕ್ಕೆ ಬಡವನಾಗಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರಮಾಡಿಸಿಕೊಳ್ಳುವದಕ್ಕೋಸ್ಕರ [ಯಾಜಕನ ಕೈಯಿಂದ] ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಮೂರು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತರಬೇಕು.


ಆಗ ಯಾಜಕನು ಆ ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯಿದುಕೊಂಡು


ಆ ಟಗರುಗಳಲ್ಲಿ ಒಂದನ್ನೂ ಆ ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು; ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.


ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ.


ಪರಲೋಕದಿಂದ ಇಳಿದುಬರುವ ಜೀವವುಳ್ಳ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾಕಾಲ ಬದುಕುವನು. ಮತ್ತು ನಾನು ಕೊಡುವ ರೊಟ್ಟಿ ನನ್ನ ಮಾಂಸವೇ; ಅದನ್ನು ಲೋಕದ ಜೀವಕ್ಕೋಸ್ಕರ ಕೊಡುವೆನು ಎಂದು ಹೇಳಿದನು.


ದೇವರು ಕೊಡುವ ಆ ರೊಟ್ಟಿ ಯಾವದಂದರೆ ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದೇ ಎಂದು ಹೇಳಿದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಹಿಟ್ಟನ್ನು ತಂದುಕೊಡಬೇಕು; ಹೇಗಂದರೆ ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,


ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಒಂದು ವರುಷದ ಟಗರು, ದೋಷಪರಿಹಾರಕಯಜ್ಞಕ್ಕಾಗಿ ಪೂರ್ಣಾಂಗವಾದ ಒಂದು ವರುಷದ ಕುರಿ, ಸಮಾಧಾನಯಜ್ಞಕ್ಕಾಗಿ ಪೂರ್ಣಾಂಗವಾದ ಟಗರು ಇವೇ.


ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವದಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟೇ. ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.


ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಇಸ್ರಾಯೇಲ್ಯರ ಹಿರಿಯರನ್ನೂ ಕರೆದು ಆರೋನನಿಗೆ ಹೀಗಂದನು -


ಅವನು ತನ್ನ ದೋಷಪರಿಹಾರಾರ್ಥವಾಗಿ ತರುವದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.


ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವದರಿಂದ ಅದು ಯಾವ ನೈವೇದ್ಯದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪು ಸೇರೇ ಇರಬೇಕು.


ನೀವು ಯೆಹೋವನಿಗೆ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಯೆಹೋವನಿಗೆ ಹೋಮ ಮಾಡಕೂಡದು.


ಒಬ್ಬನು ಆಡನ್ನಾಗಲಿ ಕುರಿಯನ್ನಾಗಲಿ ಸರ್ವಾಂಗಹೋಮ ಮಾಡಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯ ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಹೋಮ ಮಾಡಬೇಕು. ಪಾನ ದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನು ಹೋಮಮಾಡಬೇಕು.


ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿ


ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು