Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:2 - ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಮೋಶೆಯ ಸಂಗಡ ಮಾತಾಡಿ ಹೇಳಿದ್ದೇನಂದರೆ - ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವದರಿಂದ ಅವನು ನಾಶವಾದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:2
26 ತಿಳಿವುಗಳ ಹೋಲಿಕೆ  

ಆರೋನನೂ ಅವನ ಸಂತತಿಯವರೂ ವರುಷಕ್ಕೊಮ್ಮೆ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷ ಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿಪರಿಶುದ್ಧವಾಗಿದೆ.


ಇದಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯ ರಕ್ತವನ್ನು ತೆಗೆದುಕೊಂಡು ಪವಿತ್ರಾಲಯದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪರಲೋಕದಲ್ಲಿ ಪ್ರವೇಶಿಸಲಿಲ್ಲ;


ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು;


ಯೆಹೋವನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾರದೆ ಹೋದರು.


ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.


ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಾನವೆನಿಸಿಕೊಳ್ಳುವ ಇನ್ನೊಂದು ಭಾಗವಿತ್ತು;


ತರುವಾಯ ಯೆಹೋವನು ಮೋಶೆಗೆ - ಆರೋನನ ಕೋಲನ್ನು ತಿರಿಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು; ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡಬೇಕು ಎಂದು ಆಜ್ಞಾಪಿಸಿದನು.


ಅವರು ಮಹಾಪರಿಶುದ್ಧವಸ್ತುಗಳ ಹತ್ತಿರಕ್ಕೆ ಬರುವಾಗ ಸಾಯದಂತೆ ನೀವು ಅವರ ವಿಷಯದಲ್ಲಿ ಮಾಡಬೇಕಾದದ್ದೇನಂದರೆ - ಆರೋನನೂ ಅವನ ಮಕ್ಕಳೂ ಒಳಗೆ ಬಂದು ಅವರವರ ಕೆಲಸಗಳನ್ನೂ ಅವರವರ ಹೊರೆಗಳನ್ನೂ ಗೊತ್ತುಮಾಡಬೇಕು.


ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವು ಸರ್ವದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು, ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.


ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವದು.


ಆದದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ; ಹೀಗೆಯೇ ನನಗೆ ಅಪ್ಪಣೆಯಾಯಿತು.


ಈ ಆಧಾರಗಳನ್ನು ಕೊಟ್ಟದ್ದರಲ್ಲಿ ದೇವರು ಸುಳ್ಳಾಡಿರಲಾರನು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಭರವಸಕ್ಕೆ ಯೋಗ್ಯವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಣ ದೇವಸಾನ್ನಿಧ್ಯವನ್ನು ಪ್ರವೇಶಿಸುವಂಥದು.


ಅದರ ಮೇಲೆ ದೇವರ ಪ್ರಭಾವವನ್ನು ಸೂಚಿಸುವ ಕೆರೂಬಿಗಳು ಕೃಪಾಸನವನ್ನು ಆಚ್ಫಾದಿಸಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಒಂದೊಂದಾಗಿ ವಿವರಿಸುವದಕ್ಕೆ ಆಗುವದಿಲ್ಲ.


ದೇವರ ತೇಜಸ್ಸಾನ್ನಿಧ್ಯದಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಪವಿತ್ರಸ್ಥಾನವು ತುಂಬಿದ ಕಾರಣ ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಪವಿತ್ರಸ್ಥಾನದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.


ದಂಡು ಹೊರಡುವಾಗ ಆರೋನನೂ ಅವನ ಮಕ್ಕಳೂ ಒಳಗೆ ಬಂದು [ಮಹಾಪವಿತ್ರಸ್ಥಾನವನ್ನು] ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಿಬಿಟ್ಟು


ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಿಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.


ಇಸ್ರಾಯೇಲ್ಯರ ಎಲ್ಲಾ ದೋಷಗಳನ್ನು ನಿವಾರಣೆಮಾಡುವದಕ್ಕಾಗಿ ಅವರಿಗೋಸ್ಕರ ವರುಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬದೇ ನಿಮಗೆ ಶಾಶ್ವತನಿಯಮ. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.


ನೀನೂ ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯೊಳಗಣ ಕಾರ್ಯಗಳನ್ನು ನಡಿಸಬೇಕು; ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು; ನಾನು ಯಾಜಕತ್ವವನ್ನು ನಿಮಗೇ ಅನುಗ್ರಹಿಸಿದ್ದೇನೆ; ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು