Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:20 - ಕನ್ನಡ ಸತ್ಯವೇದವು J.V. (BSI)

20 ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ವೇದಿ ಇವುಗಳಿಗೋಸ್ಕರ ದೋಷಪರಿಹಾರಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಪೀಠ, ಇವುಗಳಿಗೋಸ್ಕರ ಆರೋನನು ದೋಷಪರಿಹಾರ ಮಾಡಿ ಮುಗಿಸಿದ ಮೇಲೆ, ಆ ಸಜೀವವಾದ ಹೋತವನ್ನು ತರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಹೀಗೆ ಆರೋನನು ಮಹಾ ಪವಿತ್ರಸ್ಥಳವನ್ನೂ ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಶುದ್ಧೀಕರಿಸುವನು. ಬಳಿಕ ಆರೋನನು ಜೀವಂತವಾಗಿರುವ ಹೋತವನ್ನು ಯೆಹೋವನ ಬಳಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಹೀಗೆ ಮಹಾಪರಿಶುದ್ಧ ಸ್ಥಳಕ್ಕೂ, ಸಭೆಯ ಗುಡಾರಕ್ಕೂ, ಬಲಿಪೀಠಕ್ಕೂ ಸಂಧಾನದ ಕೊನೆಯಲ್ಲಿ ಅವನು ಒಂದು ಜೀವವುಳ್ಳ ಹೋತವನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:20
12 ತಿಳಿವುಗಳ ಹೋಲಿಕೆ  

ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.


ಹೀಗೆ ಇಸ್ರಾಯೇಲ್ಯರು ನಾನಾ ವಿಧವಾದ ಅಪರಿಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಹಾಗೆಯೇ ದೋಷಪರಿಹಾರ ಮಾಡುವನು.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಆತನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ನಿಷ್ಕರ್ಷೆಮಾಡಿದನು.


ಆ ಸಮಾಧಾನವಾಕ್ಯವೇನಂದರೆ ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನೆಂಬದೇ. ಅದನ್ನು ಸಾರುವ ಸೇವೆಗೆ ನಮ್ಮನ್ನು ನೇವಿುಸಿದ್ದಾನೆ.


ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿದ್ದಾನೆ.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ ಯಜ್ಞವೇದಿಯನ್ನು ಶುದ್ಧಪಡಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಯಜ್ಞವೇದಿಯ ನಿವಿುತ್ತ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಿದನು.


ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದಿರಬೇಕೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿವಿುಕಿಸಿ ಇಸ್ರಾಯೇಲ್ಯರಿಂದ ಅದಕ್ಕುಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.


ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಾಯೇಲ್ಯರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ ಅಪರಾಧಗಳನ್ನೂ ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು