Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:29 - ಕನ್ನಡ ಸತ್ಯವೇದವು J.V. (BSI)

29 ಇದು ನಿಮಗೆ ಶಾಶ್ವತವಾದ ನಿಯಮ; ಯಾವದಂದರೆ ಸ್ವದೇಶಸ್ಥರಾದ ನೀವೂ ನಿಮ್ಮಲ್ಲಿ ಇಳುಕೊಂಡಿರುವ ಅನ್ಯದೇಶದವರೂ ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನೂ ಬಿಟ್ಟು [ಉಪವಾಸಮಾಡಿ] ಪ್ರಾಣವನ್ನು ಕುಂದಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ ನಿಮ್ಮಲ್ಲಿ ವಾಸಮಾಡುವ ಅನ್ಯದೇಶದವರೆಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನ ಸಕಲ ವಿಧವಾದ ದುಡಿಮೆಗಳನ್ನೂ ಬಿಟ್ಟು ತಮ್ಮನ್ನೇ ಪರಿತ್ಯಜಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:29
28 ತಿಳಿವುಗಳ ಹೋಲಿಕೆ  

ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವದೇಕೆ ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡಿಸಿ ನಿಮ್ಮ ಆಳುಗಳನ್ನು ದುಡಿತಕ್ಕೆಳೆಯುತ್ತೀರಿ.


ಉಪವಾಸಾಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮಾಡದೆ ದೇವಾರಾಧನೆಗಾಗಿ ಸಭೆಕೂಡಬೇಕು.


ಆಮೇಲೆ ಅವನು ನನಗೆ - ದಾನಿಯೇಲನೇ, ಭಯಪಡಬೇಡ, ನೀನು [ದೈವಸಂಕಲ್ಪವನ್ನು] ವಿಮರ್ಶಿಸುವದಕ್ಕೂ ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿವಿುತ್ತವೇ ನಾನು ಬಂದೆನು.


ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವದಕ್ಕಾಗಿ ನಾನು ನೇವಿುಸಿದ ಉಪವಾಸದಿನವು ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀತಟ್ಟನ್ನೂ ಬೂದಿಯನ್ನೂ ಆಸನಮಾಡಿಕೊಳ್ಳುವದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?


ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.


ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಕೂಡಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಕೂಡುವ ದಿನವಾದದರಿಂದ ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.


ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆ ಕೂಡಬೇಕೆಂಬದಾಗಿ ಪ್ರಸಿದ್ಧಪಡಿಸಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ; ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಮಕ್ಕಳು ಹೆಣ್ಣು ಮಕ್ಕಳು ಗಂಡಾಳು ಹೆಣ್ಣಾಳು ಪಶುಗಳು ನಿನ್ನ ಊರಲ್ಲಿ ಇರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು.


ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರವಿುಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರವಿುಸಿಕೊಂಡಿದ್ದಾನೆ.


ನಮ್ಮನ್ನು ನಾವೇ ವಿಚಾರಿಸಿಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.


ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ, ಮಾಂಸವನ್ನೂ ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ, ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು ಆ ನನ್ನ ಪರಿಶುದ್ಧ ದಿವಸದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ ಸ್ವೇಚ್ಫೆಯಾಗಿ ನಡೆಯದೆ ಸ್ವಕಾರ್ಯದಲ್ಲಿ ನಿರತರಾಗದೆ ಹರಟೆಹರಟದೆ ಯೆಹೋವನ ಸಬ್ಬತ್ತೆಂಬ ಪರಿಶುದ್ಧ ದಿನವು ಉಲ್ಲಾಸಕರವೂ ಮಾನ್ಯವೂ ಆದದ್ದೆಂದು ಘನಪಡಿಸಿದರೆ


ನಾನು ಅತ್ತತ್ತು ಉಪವಾಸ ಬಿದ್ದದ್ದೆಲ್ಲಾ ಪರಿಹಾಸ್ಯಕ್ಕೆ ಕಾರಣವಾಯಿತು.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ಯರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇವಿುಗೆ ಕೂಡಿಬಂದರು.


ಇಸ್ರಾಯೇಲ್ಯರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.


ಆರು ದಿನಗಳಲ್ಲಿ ನೀವು ಕೆಲಸವನ್ನು ನಡಿಸಬೇಕು; ಏಳನೆಯ ದಿನವು ಯಾವ ಕೆಲಸವನ್ನೂ ಮಾಡಕೂಡದ ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನೂ ಮಾಡಕೂಡದು. ನಿಮ್ಮ ಎಲ್ಲಾ ನಿವಾಸಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.


ಆರೋನನೂ ಅವನ ಸಂತತಿಯವರೂ ವರುಷಕ್ಕೊಮ್ಮೆ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷ ಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿಪರಿಶುದ್ಧವಾಗಿದೆ.


ಮೊದಲನೆಯ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಕೂಡಬೇಕು. ಈ ಎರಡು ದಿವಸಗಳಲ್ಲಿ ಯಾವ ಕೆಲಸವನ್ನೂ ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನೂ ಮಾಡಕೂಡದು. ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಆಚರಣೆಯನ್ನು ನೀವು ಕೈಕೊಳ್ಳಬೇಕು.


ಹೀಗೆ ಬಹುಕಾಲ ಕಳೆದುಹೋಯಿತು; ಮಹಾ ಉಪವಾಸದ ದಿವಸವು ಆಗಿಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವದು ಅಪಾಯಕರವಾಗಿದ್ದದರಿಂದ


ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪರಿಶುದ್ಧವಾದದ್ದೆಂದು ಎಣಿಸಿ ನಡೆದವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಕೆಲಸವೇನಾದರೂ ಮಾಡುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಆರು ದಿನಗಳು ಕೆಲಸಮಾಡಬೇಕು; ಏಳನೆಯ ದಿವಸ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ; ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು;


ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ.


ಅವರು ಅಲ್ಲಿ ಕೂಡಿಬಂದು ನೀರು ಸೇದಿ ಯೆಹೋವನ ಮುಂದೆ ಹೊಯ್ದು ಆ ದಿವಸ ಉಪವಾಸವಿದ್ದು - ನಿನಗೆ ದ್ರೋಹಿಗಳಾಗಿದ್ದೇವೆಂದು ಆತನಿಗೆ ಅರಿಕೆ ಮಾಡಿದರು. ಸಮುವೇಲನು ವಿುಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ - ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೇಳಿಕೊಳ್ಳಬೇಕೆಂದು ಪ್ರಕಟಿಸಿದೆನು.


ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನಿಮ್ಮ ದೇಶದಲ್ಲೆಲ್ಲಾ ಕೊಂಬಿನ ಧ್ವನಿಯನ್ನು ಮಾಡಿಸಬೇಕು; ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬಿನ ಧ್ವನಿಯನ್ನು ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು