Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:32 - ಕನ್ನಡ ಸತ್ಯವೇದವು J.V. (BSI)

32 [ಆರೋನನ ವಂಶದವರಲ್ಲಿ] ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಉದ್ಯೋಗವನ್ನು ನಡಿಸುವದಕ್ಕೆ ಪಟ್ಟಾಭಿಷೇಕವಾಗುವದೋ ಅವನೇ ಈ ದೋಷಪರಿಹಾರಕಾರ್ಯವನ್ನು ಆಚರಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಆದ್ದರಿಂದ ಪ್ರಧಾನಯಾಜಕನಾಗಿ ಆರಿಸಲ್ಪಟ್ಟವನು ವಸ್ತುಗಳನ್ನು ಶುದ್ಧೀಕರಿಸಲು ಈ ಆಚರಣೆಯನ್ನು ಮಾಡಬೇಕು. ಈತನು ತನ್ನ ತಂದೆಯ ನಂತರ ಪ್ರಧಾನಯಾಜಕನಾಗಿ ಸೇವೆಮಾಡುವುದಕ್ಕೆ ನೇಮಿಸಲ್ಪಟ್ಟವನಾಗಿದ್ದಾನೆ. ಆ ಯಾಜಕನು ಪವಿತ್ರವೂ ಶ್ರೇಷ್ಠವೂ ಆಗಿರುವ ನಾರುಬಟ್ಟೆಯನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯಾವನು ತನ್ನ ತಂದೆಯ ಬದಲಾಗಿ ಮಹಾಯಾಜಕ ಉದ್ಯೋಗಕ್ಕೋಸ್ಕರ ಅಭಿಷಿಕ್ತನಾಗಿ ಪ್ರತಿಷ್ಟಿಸಲಾಗಿದ್ದಾನೋ, ಆ ಮಹಾಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:32
8 ತಿಳಿವುಗಳ ಹೋಲಿಕೆ  

ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಮುಂಡಾಸವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವದಕ್ಕೆ ಮುಂಚೆ ಸ್ನಾನಮಾಡಬೇಕು.


ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ತಂದು


ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬಂದು


ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನೂ ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.


ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಸುತ್ತಿಸಬೇಕು. ಆ ಹೊತ್ತಿನಿಂದ ಯಾಜಕತ್ವವು ಶಾಶ್ವತವಾದ ನಿಯಮದಿಂದ ಅವರಿಗೆ ಉಂಟಾಗುವದು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕೋದ್ಯೋಗಕ್ಕೆ ಸೇರಿಸಬೇಕು.


ಅವನೇ ಆ ನಾರುಮಡಿಗಳನ್ನು ಧರಿಸಿಕೊಂಡು ಪರಿಶುದ್ಧವಾದ ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು