Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:4 - ಕನ್ನಡ ಸತ್ಯವೇದವು J.V. (BSI)

4 ಪಾಳೆಯದ ಒಳಗಾಗಲಿ ಹೊರಗಾಗಲಿ ಕೊಯಿದರೆ ಅವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರ ಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲ ಮುಂದೆ ತಾರದಿದ್ದರೆ, ಆ ಮನುಷ್ಯನ ಮೇಲೆ ರಕ್ತಾಪರಾಧವು ಹೊರಿಸಬೇಕು. ಅವನು ರಕ್ತ ಸುರಿಸಿರುವವನು, ಆ ಮನುಷ್ಯನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:4
30 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ನಾನೇ ಆ ಬಾಗಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು.


ಆದಕಾರಣ ಯೇಸು ಮತ್ತೂ ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಲಾಗಿದ್ದೇನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದದೆಲ್ಲವನ್ನೂ ಬರಮಾಡಿಕೊಳ್ಳುವೆನು.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಮೀರಿದವನಾದ ಕಾರಣ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳಿದನು.


ಅಪರಾಧಗಳು ಹೆಚ್ಚಾಗಿ ಕಂಡುಬರುವ ಹಾಗೆ ಧರ್ಮಶಾಸ್ತ್ರವು ಮಧ್ಯೆ ಬಂತು. ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.


ಧರ್ಮಶಾಸ್ತ್ರ ಉಂಟಾಗುವದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು; ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.


ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂದರೆ -


ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು.


ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗವಿುಸಿದರೆ ಅವನು ಅವಳ ಶೋಣಿತಸ್ಥಾನವನ್ನು ಬೈಲುಪಡಿಸಿದವನು. ಅವಳು ಬೈಲುಪಡಿಸಿಕೊಂಡವಳು; ಆದದರಿಂದ ಅವರಿಬ್ಬರೂ ಕುಲದಿಂದ ತೆಗೆದುಹಾಕಲ್ಪಡಬೇಕು.


ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಿಸಬೇಕು; ಅವಳಿಗೂ ಅದಕ್ಕೂ ಮರಣವೇ ವಿಧಿ; ಆ ಮರಣಶಿಕ್ಷೆಗೆ ತಾವೇ ಕಾರಣರು.


ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಯಾವನಾದರೂ ಈ ಹೇಸಿಗೆಯಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.


ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲ್ಯರಿಗೆ - ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.


ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವೇ ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವದಿಲ್ಲ. ಅದು ಹೇಯವಾದದ್ದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.


ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.


ಆ ಏಳು ದಿನಗಳೂ ನಿಮ್ಮ ಮನೆಗಳಲ್ಲಿ ಹುಳಿಯಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಲಿ ಸ್ವದೇಶದವನಾಗಲಿ ಇಸ್ರಾಯೇಲ್ ಜನರೊಳಗಿಂದ ತೆಗೆದುಹಾಕಲ್ಪಡಬೇಕು.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.


ಇಸ್ರಾಯೇಲ್ಯರಲ್ಲಿ ಯಾವನಾದರೂ ಹೋರಿಯನ್ನಾಗಲಿ ಕುರಿಯನ್ನಾಗಲಿ ಆಡನ್ನಾಗಲಿ ಕೊಯ್ಯುವಾಗ ಅದನ್ನು ಯೆಹೋವನಿಗೆ ಸಮರ್ಪಿಸುವದಕ್ಕಾಗಿ ಆತನ ಗುಡಾರದ ಬಾಗಲಿಗೆ ತಾರದೆ


ಯಾಕಂದರೆ ಯಜ್ಞಪಶುಗಳನ್ನು ಬೈಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲ್ಯರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತಂದು ಯೆಹೋವನ ಮುಂದೆ ಸಮಾಧಾನಯಜ್ಞರೂಪವಾಗಿ ಯೆಹೋವನಿಗೇ ಸಮರ್ಪಿಸಬೇಕು.


ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವದಕ್ಕಾಗಿ ದೇವದರ್ಶನದ ಗುಡಾರದ ಬಾಗಲಿಗೆ ತಾರದಿದ್ದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.


ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು;


ಯೆಹೋವನೇ, ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷವಿುಸಬೇಕು; ಅನ್ಯಾಯವಾದ ನರಹತ್ಯದೋಷಫಲವು ನಿನ್ನ ಜನರಾದ ಇಸ್ರಾಯೇಲ್ಯರಿಗೆ ತಗಲದಿರಲಿ ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು