Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:17 - ಕನ್ನಡ ಸತ್ಯವೇದವು J.V. (BSI)

17 ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನೀವು ನಿಮ್ಮ ಸಹೋದರನನ್ನು ಮನಸ್ಸಿನಲ್ಲಿ ದ್ವೇಷಿಸಬಾರದು. ನಿಮ್ಮ ಸಹೋದರನು ಏನಾದರೂ ತಪ್ಪುಮಾಡಿದರೆ, ಅವನೊಡನೆ ಅದರ ಕುರಿತು ಮಾತಾಡು. ಅವನ ಅಪರಾಧದಲ್ಲಿ ನೀವು ಪಾಲುಹೊಂದದಂತೆ ನೇರವಾಗಿ ಗದರಿಸಿ. ಆಗ ನೀವು ಅವನನ್ನು ಕ್ಷಮಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:17
23 ತಿಳಿವುಗಳ ಹೋಲಿಕೆ  

ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.


ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು; ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷವಿುಸಿಬಿಡು.


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ, ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕಾಣದ ಹಾಗೆ ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಅವನಿಗೆ ತಿಳಿಯದು.


ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಕತ್ತಲೆಗೆ ಸಂಬಂಧವಾದ ಕೃತ್ಯಗಳಿಂದ ಯಾವ ಪ್ರಯೋಜನವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬೈಲಿಗೆ ತಂದು ಖಂಡಿಸಿರಿ.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು; ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ಆದಕಾರಣ ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ ಕ್ರಿಸ್ತ ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ಉದ್ಯೋಗಕ್ಕೆ ನೇವಿುಸಬೇಡ. ಹಾಗೆ ನೇವಿುಸಿದರೆ ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನೆಂದು ತೋರಿ ಬಂದೀತು; ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು.


ಹೀಗಿದ್ದರೂ ನೀವು ದುಃಖವನ್ನು ತೋರಿಸದೆ ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ ಉಬ್ಬಿಕೊಂಡೇ ಇದ್ದೀರಲ್ಲಾ.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿವಿುತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ - ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು; ಆಗ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು ಅಂದುಕೊಂಡನು.


ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೇ ಮಾತನ್ನಾಗಲಿ ಕೆಟ್ಟ ಮಾತನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.


ಆಗ ನಾನು ಯೆಹೂದ ಶ್ರೀಮಂತರಿಗೆ - ನೀವು ಮಾಡುವದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು