Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:23 - ಕನ್ನಡ ಸತ್ಯವೇದವು J.V. (BSI)

23 ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರುಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ನೀವು ಆ ಕಾನಾನ್ ನಾಡನ್ನು ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ಅದನ್ನು ತಿನ್ನದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಮುಂದೆ ನೀವು ನಿಮ್ಮ ದೇಶವನ್ನು ಪ್ರವೇಶಿಸುವಿರಿ. ಆ ಸಮಯದ ಆಹಾರಕ್ಕಾಗಿ ಅನೇಕ ವಿಧಗಳ ಮರಗಳನ್ನು ನೆಡುವಿರಿ. ಸಸಿಯನ್ನು ನೆಟ್ಟನಂತರ, ನೀವು ಆ ಮರದಿಂದ ಹಣ್ಣನ್ನು ಉಪಯೋಗಿಸುವುದಕ್ಕೆ ಮೂರು ವರ್ಷಗಳು ಕಾಯಬೇಕು. ನೀವು ಆ ಹಣ್ಣನ್ನು ಉಪಯೋಗಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ, ಅದರ ಫಲವನ್ನು ಮೂರು ವರುಷಗಳವರೆಗೆ ಅಶುದ್ಧವೆಂದೆಣಿಸಿ ಅದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:23
12 ತಿಳಿವುಗಳ ಹೋಲಿಕೆ  

ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಕರುವಾಗಲಿ ಕುರಿಮರಿಯಾಗಲಿ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿವಸ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿವಸ ಮೊದಲುಗೊಂಡು ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅಂಗೀಕಾರವಾಗುವದು.


[ಅದಕ್ಕೆ ನಾನು] - ಯಾರ ಸಂಗಡ ಮಾತಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರು ಕರ್ಣಶುದ್ಧಿಯಿಲ್ಲದವರು, ಕೇಳಲಾರರು; ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ನಿಮಗೆ ಸ್ವದೇಶವಾಗಿರುವದಕ್ಕೋಸ್ಕರ ನಾನು ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ


ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.


ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ - ಇಗೋ, ಇಸ್ರಾಯೇಲ್ಯರೇ ನನ್ನ ಮಾತನ್ನು ಕೇಳಲಿಲ್ಲ. ಫರೋಹನು ಕಿವಿಗೊಟ್ಟಾನೇ? ನಾನು ಮಾತಾಡುವದರಲ್ಲಿ ಜಾಣನಲ್ಲ ಅಂದನು.


ಮೋಶೆ ಯೆಹೋವನಿಗೆ - ಸ್ವಾಮೀ, ನಾನು ಮಾತಾಡುವದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.


ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.


ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರವಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.


ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದುಕೊಡುವವರೆಗೂ [ಆ ವರುಷದ ಬೆಳೆಯ] ರೊಟ್ಟಿಯನ್ನಾಗಲಿ ಸುಟ್ಟ ತೆನೆಗಳನ್ನಾಗಲಿ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು