Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:1 - ಕನ್ನಡ ಸತ್ಯವೇದವು J.V. (BSI)

1 ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಒಬ್ಬನು ದೇವರಾದ ಯೆಹೋವನಿಗೆ ಧಾನ್ಯಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿಹಿಟ್ಟಾಗಿರಬೇಕು. ಅವನು ಈ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:1
31 ತಿಳಿವುಗಳ ಹೋಲಿಕೆ  

ಆಮೇಲೆ ಮತ್ತೊಬ್ಬ ದೇವದೂತನು ಬಂದು ಯಜ್ಞವೇದಿಯ ಬಳಿಯಲ್ಲಿ ನಿಂತನು; ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ಯರು ಯೆಹೋವನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಾಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧ ಪರ್ವತಕ್ಕೆ ಕರತರುವರು.


ಅವರು ತಂದ ನೈವೇದ್ಯದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಹೊತ್ತಾರೆಯ ಸರ್ವಾಂಗ ಹೋಮವನ್ನಲ್ಲದೆ ಅದನ್ನೂ ಯಜ್ಞವೇದಿಯ ಮೇಲೆ ಹೋಮಮಾಡಿದನು.


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರಮಾಡಿಕೊಂಡು ಭಕ್ತಿಯಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾ ಪವಿತ್ರಾತ್ಮ ಪ್ರೇರಿತರಾಗಿ ಪ್ರಾರ್ಥನೆಮಾಡುತ್ತಾ


ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ಎಲ್ಲರೂ ತಿಳಿದವರಾಗಿದ್ದೀರಿ.


ಅವರಿಗೆ - ಜೀವಕೊಡುವ ರೊಟ್ಟಿ ನಾನೇ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ, ನನ್ನನ್ನು ನಂಬುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.


ಅವನ ಕಾಣಿಕೆಯು ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ವಿುಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹೊಯಿದ ಹುಳಿಯಿಲ್ಲದ ಕಡುಬುಗಳನ್ನೂ ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು.


ಧಾನ್ಯಪಾನನೈವೇದ್ಯಗಳು ಯೆಹೋವನ ಆಲಯದಲ್ಲಿ ನಿಂತುಹೋಗಿವೆ; ಯೆಹೋವನ ಸೇವಕರಾದ ಯಾಜಕರು ದುಃಖಿಸುತ್ತಾರೆ.


ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.


ತರುವಾಯ ಅವರು [ಸರ್ವಾಂಗಹೋಮಕ್ಕಾಗಿ] ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆಬೆರಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನೂ ತೆಗೆದುಕೊಳ್ಳಬೇಕು.


ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳೆಲ್ಲಾ ಅಂದರೆ ಇಸ್ರಾಯೇಲ್ಯರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯನೈವೇದ್ಯ ದ್ರವ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞದ್ರವ್ಯ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.


[ಹೊತ್ತಾರೆಯ ಕುರಿಯೊಂದಿಗೆ] ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಸಮರ್ಪಿಸಬೇಕು.


ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಪಾನದ್ರವ್ಯಗಳನ್ನೂ;


ನೀನು ನನಗೆ ಹೋಮಕ್ಕಾಗಿ ಕುರಿಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ, ನೈವೇದ್ಯಕ್ಕಾಗಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.


ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವದು.


ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನೂ ಟಗರನ್ನೂ ನೈವೇದ್ಯಕ್ಕಾಗಿ ಎಣ್ಣೆವಿುಶ್ರವಾದ ಪದಾರ್ಥವನ್ನೂ ತೆಗೆದುಕೊಂಡು ಬರಬೇಕೆಂದು ಆಜ್ಞಾಪಿಸು ಅಂದನು.


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೇ ಕಲಸಿದ ಒಂಭತ್ತು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ಒಂದೊಂದು ರಾಶಿಯ ಮೇಲೆ ಸ್ವಚ್ಫವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಲ್ಪಡಬೇಕು.


ಆಗ ಅವನು ನನಗೆ - ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ ಪ್ರಾಯಶ್ಚಿತ್ತಯಜ್ಞಪಶುವಿನ ಮತ್ತು ದೋಷಪರಿಹಾರಕಯಜ್ಞಪಶುವಿನ ಮಾಂಸವನ್ನು ಬೇಯಿಸುವದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವದಕ್ಕೂ ಈ ಸ್ಥಳವು ಏರ್ಪಟ್ಟಿದೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು