Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:13 - ಕನ್ನಡ ಸತ್ಯವೇದವು J.V. (BSI)

13 ಯಾವನಾದರೂ ಸ್ತ್ರೀಯನ್ನು ಸಂಗವಿುಸುವಂತೆ ಪುರುಷನನ್ನು ಸಂಗವಿುಸಿದರೆ ಅವರಿಬ್ಬರೂ ಹೇಸಿಗೆಯ ಕೆಲಸವನ್ನು ಮಾಡಿದದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯಾವನಾದರು ಸ್ತ್ರೀಯನ್ನು ಸಂಭೋಗಿಸುವಂತೆ ಪುರುಷನನ್ನು ಸಂಭೋಗಿಸಿದರೆ ಅವರಿಬ್ಬರೂ ಹೇಸಿಗೆಯ ಕೃತ್ಯ ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಒಬ್ಬನು ಸ್ತ್ರೀಯೊಂದಿಗೆ ಸಂಗಮಿಸುವಂತೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ಈ ಇಬ್ಬರೂ ಭಯಂಕರವಾದ ಪಾಪ ಮಾಡಿದವರಾಗಿದ್ದಾರೆ. ಅವರಿಗೆ ಮರಣಶಿಕ್ಷೆಯಾಗಬೇಕು. ಅವರು ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ, ಅವರಿಬ್ಬರೂ ಅಸಹ್ಯವಾದದ್ದನ್ನು ಮಾಡಿದವರಾಗಿದ್ದಾರೆ. ಅವರಿಗೆ ನಿಶ್ಚಯವಾಗಿಯೂ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:13
9 ತಿಳಿವುಗಳ ಹೋಲಿಕೆ  

ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ಸ್ತ್ರೀಯನ್ನು ಸಂಗವಿುಸುವಂತೆ ಪುರುಷನನ್ನು ಸಂಗವಿುಸಬಾರದು; ಅದು ಹೇಸಿಗೆಯಾದ ಕೆಲಸ.


ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಇಸ್ರಾಯೇಲ್ಯರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಗುದಮೈಥುನಿಯಾಗಬಾರದು.


ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ತೆಗೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು ಕೂಗಿ ಹೇಳಿದರು.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚಜನರು ಬಂದು ಆ ಮನೆಯನ್ನು ಸುತ್ತಿಕೊಂಡು ಕದಗಳನ್ನು ಬಡಿದು ಮನೆಯ ಯಜಮಾನನಾದ ಮುದುಕನಿಗೆ - ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು ಎಂದು ಕೂಗಿದರು.


ಸೂಳೆತನದಿಂದಾಗಲಿ ಗುದಮೈಥುನದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಮಂದಿರದೊಳಗೆ ತರಲೇಬಾರದು; ಈ ಎರಡೂ ಆತನಿಗೆ ಅಸಹ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು