Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:10 - ಕನ್ನಡ ಸತ್ಯವೇದವು J.V. (BSI)

10 ಯಾಜಕರಲ್ಲಿ ಪ್ರಧಾನನು ಅಂದರೆ ಯಾವನು ತೈಲಾಭಿಷೇಕಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ ಪಟ್ಟಕ್ಕೆ ಬರುವನೋ ಅವನು [ದುಃಖಸೂಚನೆಗಾಗಿ] ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯಾಜಕರಲ್ಲಿ ಪ್ರಧಾನನು, ಅಂದರೆ ಯಾವನು ತೈಲಾಭಿಷೇಕ ಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ಸಂತಾಪ ಸೂಚನೆಗಾಗಿ ತನ್ನ ತಲೆಗೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ತನ್ನ ಸಹೋದರರೊಳಗೆ ಮಹಾಯಾಜಕನಾಗಿದ್ದು, ಯಾವನು ತೈಲಾಭಿಷೇಕ ಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ, ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು, ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:10
18 ತಿಳಿವುಗಳ ಹೋಲಿಕೆ  

[ಆರೋನನ ವಂಶದವರಲ್ಲಿ] ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಉದ್ಯೋಗವನ್ನು ನಡಿಸುವದಕ್ಕೆ ಪಟ್ಟಾಭಿಷೇಕವಾಗುವದೋ ಅವನೇ ಈ ದೋಷಪರಿಹಾರಕಾರ್ಯವನ್ನು ಆಚರಿಸಬೇಕು;


ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು - ಇದು ದೇವದೂಷಣೆಯ ಮಾತು; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;


ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರಿಗಿ ಸೇರಿಸಬೇಕು. ಪಟ್ಟಾಭಿಷೇಕಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


ಅದರಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯಿದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು ಅವನ ಗಡ್ಡದ ಮೇಲೆಯೂ ಅಲ್ಲಿಂದ ಅವನ ಅಂಗಿಗಳ ಕೊರಳಪಟ್ಟಿಯವರೆಗೂ ಹರಿದುಬರುವ ಶ್ರೇಷ್ಠತೈಲದಂತೆಯೂ


ಮೊರ್ದೆಕೈಯು ತಿರಿಗಿ ಅರಮನೆಯ ಬಾಗಲಿಗೆ ಹೋದನು. ಹಾಮಾನನಾದರೋ ಶೋಕಾರ್ತನಾಗಿ ಮೋರೆಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ


ದಾವೀದನು ಮೋರೆಯನ್ನು ಮುಚ್ಚಿಕೊಂಡು ಅಳುತ್ತಾ ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ನಾನು ಅಶುದ್ಧನು ಅಶುದ್ಧನು ಎಂದು ಕೂಗಿಕೊಳ್ಳಬೇಕು.


ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿನ ಮೇಲೆ ಗೋಣೀತಟ್ಟು ಸುತ್ತಿಕೊಂಡು ತನ್ನ ಮಗನಿಗಾಗಿ ಬಹುದಿನಗಳವರೆಗೂ ಹಂಬಲಿಸುತ್ತಿದ್ದನು.


ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು ತಲೆಬೋಳಿಸಿಕೊಂಡು ನೆಲದಲ್ಲಿ ಅಡ್ಡಬಿದ್ದು ನಮಸ್ಕರಿಸಿ


ಅಭಿಷೇಕತೈಲವನ್ನು ಅವನ ತಲೆಯ ಮೇಲೆ ಅಭ್ಯಂಜನಮಾಡಿ ಅವನನ್ನು ಅಭಿಷೇಕಿಸಬೇಕು.


ವಿಯೋಗದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.


ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನೂ ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.


ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿವಿುತ್ತ ಅವನು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು