Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:8 - ಕನ್ನಡ ಸತ್ಯವೇದವು J.V. (BSI)

8 ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕೆಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:8
18 ತಿಳಿವುಗಳ ಹೋಲಿಕೆ  

ನೀನು ಇಸ್ರಾಯೇಲ್ಯರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವದರಿಂದ ಪವಿತ್ರರಾಗಿರಬೇಕು.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಇವರು ನಿಜವಾಗಿ ಪ್ರತಿಷ್ಠಿತರಾಗಬೇಕೆಂದು ಇವರಿಗೋಸ್ಕರ ನಾನು ನನ್ನನ್ನು ಪ್ರತಿಷ್ಠೆಪಡಿಸಿಕೊಳ್ಳುತ್ತೇನೆ.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?


ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವದಕ್ಕೆ ನೀನು ಮಾಡಬೇಕಾದ ಕಾರ್ಯ ಯಾವದಂದರೆ - ಒಂದು ಹೋರಿಕರುವನ್ನೂ ಪೂರ್ಣಾಂಗವಾದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು;


ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸಬೇಕು; ಆಗ ಅವರು ನನಗೆ ಯಾಜಕರಾಗಿರುವರು.


ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು ಅವರನ್ನು ಪರಿಶುದ್ಧಗೊಳಿಸಿದನು; ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.


ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;


ಯಾಜಕನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಮೂಲಕವಾಗಿ ಯೆಹೋವನಿಗೆ ಆಹಾರವಾಗುವದು.


ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. ಯಾವ ವಿಷಯದಲ್ಲಿ ನಿನ್ನನ್ನು ಅಶುದ್ಧಗೊಳಿಸಿದ್ದೇವೆ ಅನ್ನುತ್ತೀರೋ?ಯೆಹೋವನ ಮೇಜಿಗೆ ಘನತೆಯೇನಿದೆ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದಾರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ನನಗೆ ಸಮರ್ಪಿಸಬೇಕಾದ ಯಜ್ಞಗಳನ್ನು ಅಂದರೆ ನನಗೆ ಸುಗಂಧಹೋಮ ಮಾಡುವದಕ್ಕಾಗಿ ಇಸ್ರಾಯೇಲ್ಯರು ನನಗೋಸ್ಕರ ತರುವ ಆಹಾರವನ್ನು ತಕ್ಕ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.


ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ; ಇದನ್ನು ನೆನಪು ಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು