Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:10 - ಕನ್ನಡ ಸತ್ಯವೇದವು J.V. (BSI)

10 ಯಾಜಕನಲ್ಲದ ಇತರನು ನೈವೇದ್ಯ ಪದಾರ್ಥವನ್ನು ಊಟಮಾಡಕೂಡದು. ಯಾಜಕನ ಬಳಿಯಲ್ಲಿ ಇಳುಕೊಂಡವನಾಗಲಿ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಯಾಜಕನಲ್ಲದವನು ನೈವೇದ್ಯಪದಾರ್ಥಗಳನ್ನು ಊಟಮಾಡಕೂಡದು. ಅಂತೆಯೇ ಯಾಜಕನ ಅತಿಥಿಯಾಗಲಿ, ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಜಕರ ಕುಟುಂಬದ ಜನರು ಮಾತ್ರವೇ ನೈವೇದ್ಯ ಪದಾರ್ಥಗಳನ್ನು ತಿನ್ನಬಹುದು. ಯಾಜಕನೊಂದಿಗೆ ಇಳಿದುಕೊಂಡವನಾಗಲಿ ಕೂಲಿಯಾಳಾಗಲಿ ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಅತಿಥಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:10
11 ತಿಳಿವುಗಳ ಹೋಲಿಕೆ  

ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ತಾನಾಗಲಿ ತನ್ನ ಸಂಗಡ ಇದ್ದವರಾಗಲಿ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ತಿಂದನಲ್ಲವೇ.


ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನದಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳಿರಲಿಲ್ಲವಾದದರಿಂದ ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.


ಅವರನ್ನು ಯಾಜಕೋದ್ಯೋಗಕ್ಕೆ ಸೇರಿಸುವದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರೇ ಭೋಜನಮಾಡಬೇಕೇ ಹೊರತು ಇತರರು ತಿನ್ನಕೂಡದು; ಅವು ಮೀಸಲು.


ಪರವಾಸಿಯೂ ಕೂಲಿಯವನೂ ಮಾಡಕೂಡದು.


ಯಾಜಕನ ಮಗಳು ವಿಧವೆಯಾಗಿಯಾಗಲಿ ಗಂಡನಿಂದ ಬಿಡಲ್ಪಟ್ಟವಳಾಗಿಯಾಗಲಿ ಮಕ್ಕಳಿಲ್ಲದ ಪಕ್ಷಕ್ಕೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ತಿರಿಗಿ ತಂದೆಯ ಮನೆ ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಉಣ್ಣಲೇಬಾರದು.


ಯಾಜಕೋದ್ಯೋಗವನ್ನು ನಡಿಸುವದಕ್ಕೆ ಆರೋನನನ್ನೂ ಅವನ ಮಕ್ಕಳನ್ನೂ ನೇವಿುಸಬೇಕು. ಇತರನು ಆ ಕೆಲಸಕ್ಕೆ ಕೈಹಾಕಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನಂದರೆ - ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗಂದರೆ - ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.


ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನೂ ಮಹಾಪರಿಶುದ್ಧವಾದದ್ದನ್ನೂ ಅವನು ಊಟಮಾಡಬಹುದೇ ಹೊರತು


ಅದೇ ದಿವಸ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ತಡೆಯಲ್ಪಟ್ಟಿದ್ದನು.


ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು. ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪುಮಾಡಿದನು.


ನೀವು ನನ್ನ ಪರಿಶುದ್ಧವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಫರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇವಿುಸಿಕೊಂಡಿರಿ; ನಿಮ್ಮ ಅಪಾರದುರಾಚಾರಗಳು ಇನ್ನು ಸಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು