Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:18 - ಕನ್ನಡ ಸತ್ಯವೇದವು J.V. (BSI)

18 ನೀನು ಆರೋನನಿಗೂ ಅವನ ಮಕ್ಕಳಿಗೂ ಇಸ್ರಾಯೇಲ್ಯರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಿ ಆಗಲಿ ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮಮಾಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಇಸ್ರಯೇಲರೇ ಆಗಲಿ, ಅವರ ನಡುವೆ ವಾಸಿಸುವವರೇ ಆಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವೇಶ್ವರನಾದ ನನಗೆ ದಹನ ಬಲಿದಾನ ಮಾಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಆರೋನನಿಗೆ, ಅವನ ಪುತ್ರರಿಗೆ ಮತ್ತು ಇಸ್ರೇಲರೆಲ್ಲರಿಗೆ ಹೀಗೆ ಹೇಳು: ಒಂದುವೇಳೆ ಇಸ್ರೇಲನಾಗಲಿ ಅಥವಾ ಪರದೇಶಸ್ಥನಾಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವಾಂಗಹೋಮ ಮಾಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದದ್ದು ಇದೇ, ‘ಇಸ್ರಾಯೇಲ್ ಮನೆತನದವರಲ್ಲಿಯಾಗಲಿ, ಇಸ್ರಾಯೇಲರಾದ ಪರಕೀಯರಲ್ಲಿಯಾಗಲಿ ಯಾರಾದರೂ ತಮ್ಮ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಯೆಹೋವ ದೇವರಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:18
29 ತಿಳಿವುಗಳ ಹೋಲಿಕೆ  

ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು


ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕಾಗಿ ದನಗಳಲ್ಲಾಗಲಿ ಆಡುಕುರಿಗಳಲ್ಲಾಗಲಿ ಒಂದು ಪಶುವನ್ನು ಹೋಮಮಾಡುವವನು ಸರ್ವಾಂಗ ಹೋಮಮಾಡಿದರೂ ಸರಿಯೇ, ಹರಕೆ ಸಲ್ಲಿಸುವದಕ್ಕೋ ಕೃತಜ್ಞತೆಯನ್ನು ತೋರಿಸುವದಕ್ಕೋ ಹಬ್ಬವನ್ನು ಆಚರಿಸುವದಕ್ಕೋ ಸಮಾಧಾನಯಜ್ಞ ಮಾಡಿದರೂ ಸರಿಯೇ,


ಆಜ್ಞಾಪಿಸಬೇಕಾದದ್ದೇನಂದರೆ - ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅದನ್ನು ದನಗಳಿಂದಾಗಲಿ ಆಡುಕುರಿಗಳಿಂದಾಗಲಿ ತೆಗೆದುಕೊಂಡು ಸಮರ್ಪಿಸಬೇಕು.


ಪೌಲನು ಇನ್ನು ಅನೇಕ ದಿವಸ ಅಲ್ಲಿದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ತನಗೆ ದೀಕ್ಷೆ ಇದ್ದದರಿಂದ ಕೆಂಖ್ರೆಯದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಅಕ್ವಿಲನೂ ಅವನ ಸಂಗಡ ಹೊರಟರು.


ಆಹಾ, ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಪರ್ವತಗಳ ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟನು ಇನ್ನು ಮುಂದೆ ನಿನ್ನನ್ನು ಹಾದುಹೋಗನು; ತೀರಾ ನಾಶವಾಗಿದ್ದಾನೆ.


ನಾನಾದರೋ ಸ್ತೋತ್ರಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು.


ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳ ಭಯಪಟ್ಟು ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.


ನೀನು ದೇವರಿಗೆ ಹರಕೆಯನ್ನು ಕಟ್ಟಿದರೆ ಅದನ್ನು ತೀರಿಸಲು ತಡಮಾಡಬೇಡ; ಆತನು ಮೂಢರಿಗೆ ಒಲಿಯನು; ನಿನ್ನ ಹರಕೆಯನ್ನು ಒಪ್ಪಿಸು.


ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ


ಯೆಹೋವನಿಗೆ ಹೊತ್ತ ಹರಕೆಗಳನ್ನು ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.


ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗ ಹೋಮಗಳನ್ನು ಸಮರ್ಪಿಸುವೆನು.


ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ.


ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.


ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.


ದೇವರೇ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.


ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


ಆ ಏಳು ವಾರಗಳಾದನಂತರ ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.


ಧಾನ್ಯ, ದ್ರಾಕ್ಷೆ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ಹರಕೆಮಾಡಿದ ಪದಾರ್ಥಗಳನ್ನೂ ಕಾಣಿಕೆಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.


ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಸಮರ್ಪಿಸಬೇಕಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಆಯಾ ದಿನಕ್ಕೆ ನೇವಿುಸಿರುವ ಪ್ರಕಾರ ಸರ್ವಾಂಗಹೋಮ, ನೈವೇದ್ಯದ್ರವ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನೂ ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.


ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.


ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಯಾರಾದರೂ ಹರಕೆಯನ್ನು ಸಲ್ಲಿಸುವದಕ್ಕಾಗಲಿ ಸ್ವೇಚ್ಫೆಯಿಂದಾಗಲಿ ಅಂಥ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ವಿುಕ್ಕದ್ದನ್ನು ಮರುದಿನದಲ್ಲಿ ತಿನ್ನಬಹುದು.


ಒಬ್ಬನು ಆಡನ್ನಾಗಲಿ ಕುರಿಯನ್ನಾಗಲಿ ಸರ್ವಾಂಗಹೋಮ ಮಾಡಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ಆ ಮರಿಯು ಪೂರ್ಣಾಂಗವಾದ ಒಂದು ವರುಷದ ಗಂಡಾಗಿರಬೇಕು; ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮಮಾಡಿರಿ, [ಕೊಟ್ಟ] ಕಾಣಿಕೆಗಳನ್ನು ಪ್ರಕಟಿಸಿರಿ, ಸಾರಿಕೊಳ್ಳಿರಿ; ಇಸ್ರಾಯೇಲ್ಯರೇ, ಹೀಗೆ ಮಾಡುವದು ನಿಮಗಿಷ್ಟವಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು ಜನರು ಸ್ವೇಚ್ಫೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನೂ ಯೆಹೋವನಿಗೋಸ್ಕರ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧವಸ್ತು ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು