Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:25 - ಕನ್ನಡ ಸತ್ಯವೇದವು J.V. (BSI)

25 ಅನ್ಯದೇಶದವನಿಂದ ತೆಗೆದುಕೊಂಡು ಅಂಥ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದದ್ದಲ್ಲ; ಆದಕಾರಣ ಸಮರ್ಪಕವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅನ್ಯದೇಶದವನಿಂದ ತೆಗೆದುಕೊಂಡ ಅಂಥ ಪ್ರಾಣಿಯನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು. ಅದು ಕುಂದುಳ್ಳದ್ದು, ಕಳಂಕಿತವಾದದ್ದು. ಆದಕಾರಣ ಸ್ವೀಕೃತವಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:25
12 ತಿಳಿವುಗಳ ಹೋಲಿಕೆ  

ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವದರಿಂದ ಪವಿತ್ರರಾಗಿರಬೇಕು.


ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ.


ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.


ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಇಸ್ರಾಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಫರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಹೊಲೆಗೆಡಿಸಿ ನನ್ನ ಒಡಂಬಡಿಕೆಯನ್ನು ಭಂಗಪಡಿಸಿ ನಿಮ್ಮ ಅವಿುತದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು