Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:10 - ಕನ್ನಡ ಸತ್ಯವೇದವು J.V. (BSI)

10 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ [ಜವೆಗೋದಿಯ] ಪೈರನ್ನು ಕೊಯ್ಯುವಾಗ ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು. ನೀವು ಅಂಗೀಕಾರವಾಗುವಂತೆ ಅವನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಆ ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:10
22 ತಿಳಿವುಗಳ ಹೋಲಿಕೆ  

ಭೂವಿುಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಉತ್ಕೃಷ್ಟವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.


ಬೆಳೆ ಕೊಯ್ಯುವದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ


[ಪಸ್ಕವಾದ ಏಳು] ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮ ಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.


ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ನಾನು ನಿಮ್ಮ ನಿವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ


ನಿಮ್ಮ ನಿವಾಸಗಳಿಂದ [ತಂದ ಹಿಟ್ಟಿನಲ್ಲಿ] ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.


[ಪಸ್ಕವಾದ ಏಳು] ವಾರಗಳ ಮೇಲೆ ನಡೆಯುವ ಜಾತ್ರೆ ಅಂದರೆ ಗೋದೀ ಬೆಳೆಯ ಪ್ರಥಮ ಸಮರ್ಪಣದ ಸುಗ್ಗಿಜಾತ್ರೆಯನ್ನೂ ಸಂವತ್ಸರದ ಅಂತ್ಯದಲ್ಲಿ ಫಲಸಂಗ್ರಹದ ಜಾತ್ರೆಯನ್ನೂ ಆಚರಿಸಬೇಕು.


ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಜಾತ್ರೆಯನ್ನೂ ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ ವರುಷದ ಕೊನೆಯಲ್ಲಿ ಫಲಸಂಗ್ರಹ ಜಾತ್ರೆಯನ್ನೂ ಆಚರಿಸಬೇಕು.


ಕಣದಿಂದಲೂ ಆಲೆಯಿಂದಲೂ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವದಕ್ಕೆ ತಡ ಮಾಡಬಾರದು. ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು.


ಕಣಕದಲ್ಲಿ ಮೊದಲನೆಯ ಉರುಳಿ ನೈವೇದ್ಯವಾದ ಮೇಲೆ ಕಣಕವೆಲ್ಲಾ ನೈವೇದ್ಯವಾದ ಹಾಗಾಯಿತು; ಬೇರು ದೇವರದಾಗಿದ್ದ ಮೇಲೆ ಕೊಂಬೆಗಳೂ ದೇವರವು.


ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಅದ್ದುತ್ತಲೇ ಸುಗ್ಗೀಕಾಲದಲ್ಲೆಲ್ಲಾ ದಡಮೀರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.


ನಿಮಗೆ ಸ್ವದೇಶವಾಗಿರುವದಕ್ಕೋಸ್ಕರ ನಾನು ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಸಬ್ಬತ್‍ದಿನದ ಮಾರಣೆಯ ದಿನದಲ್ಲಿಯೇ ಅದನ್ನು ನಿವಾಳಿಸಬೇಕು.


ಹೀಗೆ ನೊವೊವಿುಯು ಮೋವಾಬ್ಯಳೂ ತನ್ನ ಸೊಸೆಯೂ ಆದ ರೂತಳೊಡನೆ ಬೇತ್ಲೆಹೇವಿುಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು