Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:14 - ಕನ್ನಡ ಸತ್ಯವೇದವು J.V. (BSI)

14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದುಕೊಡುವವರೆಗೂ [ಆ ವರುಷದ ಬೆಳೆಯ] ರೊಟ್ಟಿಯನ್ನಾಗಲಿ ಸುಟ್ಟ ತೆನೆಗಳನ್ನಾಗಲಿ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದ ಕಾಣಿಕೆಯನ್ನು ತಂದುಕೊಡುವವರೆಗೆ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ, ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನೀವು ಎಲ್ಲಿದ್ದರೂ ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಯಾವ ಹೊಸ ಧಾನ್ಯವನ್ನಾಗಲಿ ಹಣ್ಣನ್ನಾಗಲಿ ಹೊಸ ಧಾನ್ಯದಿಂದ ಮಾಡಿದ ರೊಟ್ಟಿಯನ್ನಾಗಲಿ ದೇವರಿಗೆ ಅರ್ಪಿಸುವ ಮೊದಲು ತಿನ್ನಬಾರದು. ಈ ನಿಯಮವು ನಿಮ್ಮ ಎಲ್ಲಾ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸ ಸ್ಥಾನಗಳಲ್ಲಿಯೂ ಶಾಶ್ವತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:14
15 ತಿಳಿವುಗಳ ಹೋಲಿಕೆ  

ಭೂವಿುಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ ಆಜ್ಞಾವಿಧಿಧರ್ಮಗಳನ್ನು ಕಲಿಸಿದಿ.


ಐಗುಪ್ತದೇಶದಲ್ಲಿ ದಾಸರಾಗಿದ್ದೇವೆಂಬದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.


ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವದೂ ನಿಮ್ಮ ಕರ್ತವ್ಯವಾಗಿದೆ ಎಂದು ಹೇಳಿದನು.


ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ.


ಯೆಹೋವನ ನಿಯಮಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.


ನೀವು ಯೆಹೋವನಿಗೆ ಪ್ರಥಮಫಲ ನೈವೇದ್ಯವನ್ನು ಮಾಡಬೇಕಾದರೆ ಗೋದಿಯ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು ಉವ್ಮಿುಗೆ ಸಮರ್ಪಿಸಬೇಕು.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.


ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


ಹೀಗೆ ಪ್ರತಿ ವರುಷದಲ್ಲಿಯೂ ಏಳು ದಿನಗಳವರೆಗೆ ಈ ಉತ್ಸವವನ್ನು ಆಚರಿಸಬೇಕು; ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು