Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:27 - ಕನ್ನಡ ಸತ್ಯವೇದವು J.V. (BSI)

27 ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವು ಸರ್ವದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು, ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವನ್ನು ಸರ್ವದೋಷಪರಿಹಾರ ದಿನವನ್ನಾಗಿ ಆಚರಿಸಬೇಕು. ಅಂದು ದೇವಾರಾಧನೆಗಾಗಿ ಸಭೆಕೂಡಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಏಳನೆಯ ತಿಂಗಳಿನ ಹತ್ತನೆಯ ದಿನವು ದೋಷಪರಿಹಾರಕ ದಿನವಾಗಿರುವುದು. ಆಗ ಪವಿತ್ರ ಸಭೆಯಾಗಿ ಸೇರಬೇಕು. ನೀವು ಆಹಾರವನ್ನು ತಿನ್ನಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಕಾಣಿಕೆಯನ್ನು ಸಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:27
19 ತಿಳಿವುಗಳ ಹೋಲಿಕೆ  

ಆರೋನನೂ ಅವನ ಸಂತತಿಯವರೂ ವರುಷಕ್ಕೊಮ್ಮೆ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷ ಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿಪರಿಶುದ್ಧವಾಗಿದೆ.


ಆಗ ಅವನು ಹೊರಗೆ ಬಂದು ತನಗೋಸ್ಕರವೂ ಜನಸಮೂಹಕ್ಕೋಸ್ಕರವೂ ಸರ್ವಾಂಗಹೋಮಗಳನ್ನು ಸಮರ್ಪಿಸಿ ತನಗೋಸ್ಕರವಾಗಿಯೂ ಜನರಿಗೋಸ್ಕರವಾಗಿಯೂ ದೋಷಪರಿಹಾರಮಾಡಬೇಕು.


ತರುವಾಯ ಅವನು ಜನರಿಗೋಸ್ಕರವಾದ ದೋಷಪರಿಹಾರಕಯಜ್ಞದ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿವಿುಕಿಸಬೇಕು.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವದಕ್ಕಾಗಿ ನಾನು ನೇವಿುಸಿದ ಉಪವಾಸದಿನವು ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀತಟ್ಟನ್ನೂ ಬೂದಿಯನ್ನೂ ಆಸನಮಾಡಿಕೊಳ್ಳುವದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ - ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೇಳಿಕೊಳ್ಳಬೇಕೆಂದು ಪ್ರಕಟಿಸಿದೆನು.


ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನಿಮ್ಮ ದೇಶದಲ್ಲೆಲ್ಲಾ ಕೊಂಬಿನ ಧ್ವನಿಯನ್ನು ಮಾಡಿಸಬೇಕು; ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬಿನ ಧ್ವನಿಯನ್ನು ಮಾಡಿಸಬೇಕು.


ಆರೋನನು ತನಗೋಸ್ಕರವಾದ ದೋಷಪರಿಹಾರಕಯಜ್ಞದ ಹೋರಿಯನ್ನು ಸಮರ್ಪಿಸಿ ತನಗೋಸ್ಕರವೂ ತನ್ನ ಮನೆತನದವರಿಗೋಸ್ಕರವೂ ದೋಷಪರಿಹಾರವನ್ನು ಮಾಡಬೇಕು.


ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಗುವದನ್ನು ಬಿಟ್ಟು ಗೋಳಾಡಿರಿ; ಸಂತೋಷವನ್ನು ಬಿಟ್ಟು ಮನಗುಂದಿದವರಾಗಿರಿ.


ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.


ಹೀಗೆ ಬಹುಕಾಲ ಕಳೆದುಹೋಯಿತು; ಮಹಾ ಉಪವಾಸದ ದಿವಸವು ಆಗಿಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವದು ಅಪಾಯಕರವಾಗಿದ್ದದರಿಂದ


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಅದು ದೋಷಪರಿಹಾರಕ ದಿವಸ; ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕಾಚಾರವು ನಡೆಯುವದು.


ಹೀಗೆ ಇಸ್ರಾಯೇಲ್ಯರು ನಾನಾ ವಿಧವಾದ ಅಪರಿಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಹಾಗೆಯೇ ದೋಷಪರಿಹಾರ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು