Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:32 - ಕನ್ನಡ ಸತ್ಯವೇದವು J.V. (BSI)

32 ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿ ದಿನವಾಗಿರಬೇಕು. ಅದರಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿದಿನವಾಗಿರಬೇಕು. ಅಂದು ಉಪವಾಸದಿಂದಿರಬೇಕು. ಆ ತಿಂಗಳಿನ ಒಂಬತ್ತನೆಯ ದಿನದ ಸಂಜೆ ಪ್ರಾರಂಭಿಸಿ ಮರುದಿನದ ಸಂಜೆಯವರೆಗೆ ನೀವು ಆ ವಿರಾಮ ದಿನವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅದು ನಿಮಗಾಗಿ ವಿಶ್ರಾಂತಿಯ ವಿಶೇಷ ದಿನವಾಗಿರುವುದು. ನೀವು ಆಹಾರವನ್ನು ತಿನ್ನಬಾರದು. ತಿಂಗಳಿನ ಒಂಭತ್ತನೆಯ ದಿನದ ನಂತರ ಸಾಯಂಕಾಲದಲ್ಲಿ ಈ ವಿಶ್ರಾಂತಿಯ ವಿಶೇಷ ದಿನವನ್ನು ಪ್ರಾರಂಭಿಸುವಿರಿ. ಈ ವಿಶ್ರಾಂತಿಯ ವಿಶೇಷ ದಿನವು ಆ ಸಾಯಂಕಾಲದಿಂದ ಹಿಡಿದು ಮರುದಿನ ಸಾಯಂಕಾಲದವರೆಗೆ ಮುಂದುವರಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:32
19 ತಿಳಿವುಗಳ ಹೋಲಿಕೆ  

ಆದದರಿಂದ ನಾವು ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸಪಡೋಣ; ನಮ್ಮಲ್ಲಿ ಒಬ್ಬರಾದರೂ ಅವರ ಅವಿಧೇಯತ್ವವನ್ನು ಅನುಸರಿಸುವವರಾಗಬಾರದು.


ದೇವರ ಕೆಲಸಗಳು ಲೋಕಾದಿಯಿಂದ ಮುಗಿದು ಹೋಗಿ [ಆತನ ವಿಶ್ರಾಂತಿಯು ಸಿದ್ಧವಾಗಿದ್ದರೂ] ಆತನು - ನನ್ನ ವಿಶ್ರಾಂತಿಯಲ್ಲಿ ಇವರು ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು ಎಂಬದಾಗಿ ಹೇಳಿದೆನಷ್ಟೆ. ನಂಬಿರುವ ನಾವಾದರೋ ಆ ವಿಶ್ರಾಂತಿಯಲ್ಲಿ ಸೇರುತ್ತಲೇ ಇದ್ದೇವೆ.


ನಮ್ಮನ್ನು ನಾವೇ ವಿಚಾರಿಸಿಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.


ದುಃಖಪಡುವವರು ಧನ್ಯರು; ಅವರು ಸಮಾಧಾನ ಹೊಂದುವರು.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.


ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.


ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವು ಸರ್ವದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು, ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.


ಇದು ನಿಮಗೆ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸವಾಗಿರಬೇಕು; ಇದೇ ನಿಮಗೆ ಶಾಶ್ವತ ನಿಯಮ.


ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಇದಲ್ಲದೆ ಸಬ್ಬತ್‍ದಿನ ಪ್ರಾರಂಭವಾಗುವದಕ್ಕಿಂತ ಮೊದಲು ಯೆರೂಸಲೇವಿುನ ಬಾಗಲುಗಳಲ್ಲಿ ಕತ್ತಲಾಗಿರುವಾಗಲೇ ಕದಗಳನ್ನು ಮುಚ್ಚಿಸಿ ಸಬ್ಬತ್ ದಿನವು ಗತಿಸುವದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಕಾವಲಿರಿಸಿದೆನು.


ಇದು ನಿಮಗೆ ಶಾಶ್ವತವಾದ ನಿಯಮ; ಯಾವದಂದರೆ ಸ್ವದೇಶಸ್ಥರಾದ ನೀವೂ ನಿಮ್ಮಲ್ಲಿ ಇಳುಕೊಂಡಿರುವ ಅನ್ಯದೇಶದವರೂ ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನೂ ಬಿಟ್ಟು [ಉಪವಾಸಮಾಡಿ] ಪ್ರಾಣವನ್ನು ಕುಂದಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು