Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:39 - ಕನ್ನಡ ಸತ್ಯವೇದವು J.V. (BSI)

39 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದನಂತರ ಯೆಹೋವನು ನೇವಿುಸಿದ [ಪರ್ಣಶಾಲೆಗಳ] ಜಾತ್ರೆಯನ್ನು ಏಳು ದಿನಗಳವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನೂ ಮಾಡದೆ ಸಂಪೂರ್ಣವಿರಾಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ - ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಸರ್ವೇಶ್ವರ ನೇಮಿಸಿದ ಪರ್ಣಕುಟೀರಗಳ ಜಾತ್ರೆಯನ್ನು ಏಳುದಿನದವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿ ಹಾಗು ಎಂಟನೆಯ ದಿನದಲ್ಲಿ ಎಲ್ಲ ದುಡಿಮೆಯನ್ನು ನಿಲ್ಲಿಸಿ ಸಂಪೂರ್ಣ ವಿರಾಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ನಿಮ್ಮ ದೇಶದಲ್ಲಿ ಪೈರುಗಳನ್ನು ಸಂಗ್ರಹಿಸಿದ ನಂತರ, ಏಳು ದಿನಗಳವರೆಗೆ ನೀವು ಯೆಹೋವನ ಹಬ್ಬವನ್ನು ಆಚರಿಸಬೇಕು. ನೀವು ಮೊದಲನೆಯ ಮತ್ತು ಎಂಟನೆಯ ದಿನದಲ್ಲಿ ವಿಶ್ರಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:39
7 ತಿಳಿವುಗಳ ಹೋಲಿಕೆ  

ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಜಾತ್ರೆಯನ್ನೂ ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ ವರುಷದ ಕೊನೆಯಲ್ಲಿ ಫಲಸಂಗ್ರಹ ಜಾತ್ರೆಯನ್ನೂ ಆಚರಿಸಬೇಕು.


ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಬೇಕು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.


ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಕೂಡಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಕೂಡುವ ದಿನವಾದದರಿಂದ ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು.


ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಸಮರ್ಪಿಸಬೇಕಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಆಯಾ ದಿನಕ್ಕೆ ನೇವಿುಸಿರುವ ಪ್ರಕಾರ ಸರ್ವಾಂಗಹೋಮ, ನೈವೇದ್ಯದ್ರವ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನೂ ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.


ಮೊದಲನೆಯ ದಿನದಲ್ಲಿ ಶ್ರೇಷ್ಠ ವೃಕ್ಷದ ಹಣ್ಣುಗಳನ್ನೂ ಖರ್ಜೂರ ಮರದ ಗರಿಗಳನ್ನೂ ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನೂ ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನೂ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳು ಸಂಭ್ರಮವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು