Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:28 - ಕನ್ನಡ ಸತ್ಯವೇದವು J.V. (BSI)

28 ಅವನು ಆ ಭೂವಿುಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರುಷದಲ್ಲಿ ಅದು ಬಿಡುಗಡೆಯಾಗುವದು; ಆಗ ಆ ಭೂವಿು ತಿರಿಗಿ ಅವನ ವಶಕ್ಕೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು. ಆಗ ಆ ಭೂಮಿ ಮರಳಿ ಅವನ ವಶಕ್ಕೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಆ ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ಆ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಯಜಮಾನನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ಮತ್ತೆ ಅದರ ಸರಿಯಾದ ಕುಟುಂಬಕ್ಕೆ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ತಿರುಗಿ ಸಲ್ಲಿಸುವುದಕ್ಕೆ ಅವನಿಗೆ ಆಗದಿದ್ದರೆ, ಅವನು ಮಾರಿದ್ದು ಜೂಬಿಲಿಯ ವರ್ಷದವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು ಮತ್ತು ಸಂಭ್ರಮದ ವರ್ಷದಲ್ಲಿ ಅದು ಬಿಡುಗಡೆಯಾಗಬೇಕು, ಅವನು ತನ್ನ ಸೊತ್ತನ್ನು ಪಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:28
11 ತಿಳಿವುಗಳ ಹೋಲಿಕೆ  

ಈ ದೇಶದಲ್ಲಿ ಜನರು ಮನೆಹೊಲತೋಟಗಳನ್ನು ಮತ್ತೆ ಕೊಳ್ಳುವರು, ಕೊಡುವರು. ಇದು ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ ಎಂದು ಖಂಡಿತವಾಗಿ ಹೇಳಿದೆನು.


ಜೂಬಿಲಿ ವರುಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂವಿುಗಳು ತಿರಿಗಿ ನಿಮ್ಮ ವಶಕ್ಕೆ ಬರುವವು.


ನೀವು ಐವತ್ತನೆಯ ವರುಷವನ್ನು ದೇವರಿಗೆ ಮೀಸಲಾದ ವರುಷವೆಂದು ಭಾವಿಸಿ ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂಬದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂವಿುಗಳಿಗೂ ಸ್ವಜನರ ಬಳಿಗೂ ಹೋಗಿ ಇರಬಹುದು.


ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರುಷ ಪೂರ್ತಿಯಾಗುವದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರುಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವದು.


ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರುಷದೊಳಗಾಗಿ ಬಿಡಿಸಲ್ಪಡದೆ ಹೋದರೆ ಅದು ಜೂಬಿಲಿ ಸಂವತ್ಸರದಲ್ಲಿಯೂ ಬಿಡುಗಡೆಯಾಗದೆ ಕ್ರಯಕೊಟ್ಟವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವದು.


ಆಗ ಅವನನ್ನೂ ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವಾಸ್ತ್ಯಕ್ಕೂ ಹೋಗಬಹುದು.


ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂವಿುಗೆ ಸೇರಿದೆಯೋ ಅವನಿಗೆ ತಿರಿಗಿ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು