Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:21 - ಕನ್ನಡ ಸತ್ಯವೇದವು J.V. (BSI)

21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನ ಸ್ವಕೀಯವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲ ಸರ್ವೇಶ್ವರನ ಸ್ವಕೀಯ ಹೊಲವಾದಂತೆ ಅವರ ಸೊತ್ತಾಗಿಯೇ ಇರಬೇಕು. ಅದು ಯಾಜಕರ ವಶದಲ್ಲಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವನು ಭೂಮಿಯನ್ನು ಹಿಂದಕ್ಕೆ ಕೊಂಡುಕೊಳ್ಳದಿದ್ದರೆ, ಅದು ಜ್ಯೂಬಿಲಿ ಸಂವತ್ಸರದಲ್ಲಿ ಯೆಹೋವನಿಗೆ ಮೀಸಲಾದದ್ದಾಗಿರುವುದು. ಅದು ಎಂದೆಂದಿಗೂ ಯಾಜಕನದ್ದಾಗಿರುವುದು. ಅದು ಪೂರ್ಣವಾಗಿ ಯೆಹೋವನಿಗೆ ಪ್ರತಿಷ್ಠಿಸಿದ ಭೂಮಿಯಂತೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:21
11 ತಿಳಿವುಗಳ ಹೋಲಿಕೆ  

ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕಯಜ್ಞದ್ರವ್ಯವನ್ನೂ ಪ್ರಾಯಶ್ಚಿತ್ತಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲ್ಯರು ಹರಕೆಮಾಡಿಕೊಡುವದೆಲ್ಲವೂ ಅವರಿಗೆ ಸಲ್ಲಬೇಕು.


ಕೇವಲ ಯೆಹೋವನದಾಗಿಯೇ ಇರುವದಕ್ಕೆ ಇಸ್ರಾಯೇಲ್ಯರು ಹರಕೆಮಾಡಿಕೊಡುವದೆಲ್ಲವೂ ನಿನಗಾಗಬೇಕು.


ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬೈಲಿನ ಹೊಲಗಳಂತೆ ಎಣಿಸಲ್ಪಡಬೇಕು. ಅವುಗಳನ್ನು ಬಿಡಿಸುವ ಅಧಿಕಾರವಿರುವದು; ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.


ಅವನು ಆ ಭೂವಿುಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರುಷದಲ್ಲಿ ಅದು ಬಿಡುಗಡೆಯಾಗುವದು; ಆಗ ಆ ಭೂವಿು ತಿರಿಗಿ ಅವನ ವಶಕ್ಕೆ ಬರುವದು.


ನೀವು ಐವತ್ತನೆಯ ವರುಷವನ್ನು ದೇವರಿಗೆ ಮೀಸಲಾದ ವರುಷವೆಂದು ಭಾವಿಸಿ ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂಬದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂವಿುಗಳಿಗೂ ಸ್ವಜನರ ಬಳಿಗೂ ಹೋಗಿ ಇರಬಹುದು.


ಪ್ರಭುಗಳ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು ಎಂದು ಪ್ರಕಟಿಸಿದರು.


ಇದೂ ಇದರಲ್ಲಿರುವದೆಲ್ಲವೂ ಕೇವಲ ಯೆಹೋವನ ಸೊತ್ತೇ ಎಂದು ತಿಳಿಯಿರಿ. ಸೂಳೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ; ನಾವು ಕಳುಹಿಸಿದ ದೂತರನ್ನು ಅವಳು ಅಡಗಿಸಿಟ್ಟಳಲ್ಲಾ.


ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.


ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದಿಲ್ಲ.


ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂವಿುಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು