Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:2 - ಕನ್ನಡ ಸತ್ಯವೇದವು J.V. (BSI)

2 ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಆ ಪ್ರಾಣಿಯನ್ನು ಸರ್ವೇಶ್ವರನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಡಬೇಕು; ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ಆ ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:2
23 ತಿಳಿವುಗಳ ಹೋಲಿಕೆ  

ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತರಿಸಿ ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಆಮೇಲೆ ಅವನು ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು.


ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರಕಡೆ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.


ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು.


ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚೆಲ್ಲಬೇಕು.


ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ


ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.


ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವದರಿಂದ ಅವುಗಳನ್ನು ಬಿಡಕೂಡದು; ಅವುಗಳ ರಕ್ತವನ್ನು ಯಜ್ಞವೇದಿಗೆ ಎರಚಿ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.


ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟ ನಂತರ


ಆಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟನಂತರ


ಇಸ್ರಾಯೇಲ್ಯರಲ್ಲಿ ಯಾವನಾದರೂ ಹೋರಿಯನ್ನಾಗಲಿ ಕುರಿಯನ್ನಾಗಲಿ ಆಡನ್ನಾಗಲಿ ಕೊಯ್ಯುವಾಗ ಅದನ್ನು ಯೆಹೋವನಿಗೆ ಸಮರ್ಪಿಸುವದಕ್ಕಾಗಿ ಆತನ ಗುಡಾರದ ಬಾಗಲಿಗೆ ತಾರದೆ


ಪಾಳೆಯದ ಒಳಗಾಗಲಿ ಹೊರಗಾಗಲಿ ಕೊಯಿದರೆ ಅವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು