Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:3 - ಕನ್ನಡ ಸತ್ಯವೇದವು J.V. (BSI)

3 ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3-4 ಆ ಬಲಿಪ್ರಾಣಿಯ ಈ ಭಾಗಗಳನ್ನು, ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ತೆಗೆದು ಸರ್ವೇಶ್ವರನಿಗೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3-4 ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಿನ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ತೆಗೆದು ಪಿತ್ತಕೋಶದ ಹತ್ತಿರ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:3
25 ತಿಳಿವುಗಳ ಹೋಲಿಕೆ  

ಅದರ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು.


ಈ ಜನರು ಮಾತಿನಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಮನಸ್ಸು ನನಗೆ ದೂರವಾಗಿದೆ.


ಬಳಿಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಲ್ಪಟ್ಟ ಆ ಟಗರಿನ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನೂ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ


ಪಾಪಾಧೀನಸ್ವಭಾವವು ನಾಶವಾಗಿ ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿತೆಂದು ತಿಳಿದಿದ್ದೇವೆ.


ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿರಸವು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆಯಲ್ಲಾ.


ಆದರೆ ನಿಮ್ಮ ಕಣ್ಣು ಕಾಣುತ್ತವೆ, ನಿಮ್ಮ ಕಿವಿ ಕೇಳುತ್ತವೆ; ಆದದರಿಂದ ನೀವು ಧನ್ಯರು.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ಕಂದಾ, ನನ್ನ ಕಡೆಗೆ ಮನಸ್ಸುಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ಕೊಬ್ಬಿನಂತೆ ಅವರ ಬುದ್ಧಿ ಮಂದವಾಯಿತು; ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೇ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅದು ಸುಗಂಧ ಹೋಮರೂಪವಾಗಿ ಯೆಹೋವನಿಗೆ ಆಹಾರವಾಗಿರುವದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.


ಅದರ ಮೇಲೆ ಕಟ್ಟಿಗೆಯನ್ನು ಒಟ್ಟಿ ಆ ತುಂಡುಗಳನ್ನೂ ತಲೆಯನ್ನೂ ಕೊಬ್ಬನ್ನೂ ಅದರ ಮೇಲೆ ಕ್ರಮವಾಗಿ ಇಡಬೇಕು.


ಅವನು ಆ ಪಶುವಿನ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನೂ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.


ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು;


ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು.


ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ - ಯಾಜಕನಿಗೋಸ್ಕರ ಕರಿಯತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವದಿಲ್ಲ; ಅವನಿಗೆ ಹಸೀ ಮಾಂಸವೇ ಬೇಕು ಅನ್ನುವನು.


ಅದನ್ನೆಲ್ಲಾ ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮವೇದಿಯ ಮೇಲೆ ಹೋಮಮಾಡಬೇಕು.


ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ.


ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದದ್ದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನೂ ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವದಕ್ಕಾಗಿ ತಂದು ಸಮರ್ಪಿಸಬೇಕು.


ಆ ದೋಷಪರಿಹಾರಕಯಜ್ಞಪಶುವಿನ ಕೊಬ್ಬನ್ನೂ ಹುರುಳಿಕಾಯಿಗಳನ್ನೂ ಕಾಳಿಜದ ಹತ್ತಿರವಿರುವ ಕೊಬ್ಬನ್ನೂ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.


ಅವನು ದೋಷಪರಿಹಾರಕಯಜ್ಞ ಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು.


ಆದರೆ ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು