Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:2 - ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:2
18 ತಿಳಿವುಗಳ ಹೋಲಿಕೆ  

ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ, ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾವನು? ಮರೆಯಾದವುಗಳಿಂದ ನನ್ನನ್ನು ನಿರ್ಮಲಮಾಡು.


ನಿಮ್ಮ ದೇಶಸ್ಥರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ಅದೇ ಬಾಯಿಂದ ಸ್ತುತಿ ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ, ಹೀಗಿರುವದು ಯೋಗ್ಯವಲ್ಲ.


ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರನ್ನೂ ಮಾರ್ಗತಪ್ಪಿ ನಡೆಯುವವರನ್ನೂ ತಾಳ್ಮೆಯಿಂದ ಸಹಿಸಿಕೊಳ್ಳುವದಕ್ಕೆ ಶಕ್ತನಾಗಿರುವನು.


ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದದರಿಂದ ಅವನು ತನ್ನ ಕೋಲನ್ನು ಜೇನು ತೊಟ್ಟಿಯಲ್ಲಿ ಚುಚ್ಚಿ ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.


ಆ ಪಟ್ಟಣಗಳ ಸಂಗತಿ ಹೇಗಂದರೆ - ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ಇಸ್ರಾಯೇಲ್ಯರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ


ಆಮೇಲೆ ಅವನು ಅಬ್ರಹಾಮನನ್ನು ಕರಿಸಿ - ನೀನು ನಮಗೆ ಮಾಡಿದ್ದೇನು? ನಾನು ಯಾವ ತಪ್ಪು ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ಮಾಡಬಾರದ ಕಾರ್ಯಗಳನ್ನು ನನಗೆ ಮಾಡಿದೆ ಎಂದು ಹೇಳಿ -


ಯೆಹೋವನು ಮೋಶೆಗೆ ಇಂತೆಂದನು -


ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅಷ್ಟನ್ನೂ ಅದರ ಐದನೆಯ ಭಾಗವನ್ನೂ ಯಾಜಕನಿಗೆ ತೆರಬೇಕು.


ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ; ಇದು ಅಜಾಗ್ರತೆಯಿಂದಾಯಿತೆಂದು ದೂತನ ಮುಂದೆ ಹೇಳಬೇಡ; ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಗೆಲಸವನ್ನು ಏಕೆ ಹಾಳುಮಾಡಬೇಕು?


ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾ ದ್ರೋಹಕ್ಕೆ ಒಳಗಾಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು