Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:27 - ಕನ್ನಡ ಸತ್ಯವೇದವು J.V. (BSI)

27 ನಿಮ್ಮ ದೇಶಸ್ಥರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಿಮ್ಮ ನಾಡಿನವರಲ್ಲಿ ಬೇರೆ ಯಾರಾದರು ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಸಾಮಾನ್ಯ ಜನರಲ್ಲಿ ಒಬ್ಬನು ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:27
14 ತಿಳಿವುಗಳ ಹೋಲಿಕೆ  

ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ]


ಯಾವನಾದರೂ ಒಬ್ಬನು ಮಾತ್ರ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕಯಜ್ಞಕ್ಕಾಗಿ ಒಂದು ವರುಷದ ಆಡನ್ನು ಸಮರ್ಪಿಸಬೇಕು.


ಇಸ್ರಾಯೇಲ್ಯರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ


ಈ ವಿಷಯದಲ್ಲಿ ಇಸ್ರಾಯೇಲ್ಯರಲ್ಲಿರುವ ಸ್ವದೇಶದವರಿಗೂ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು.


ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು.


ನಿಮಗೂ ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ಪ್ರಮಾಣವಿಧಿಗಳಿರಬೇಕು.


ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ವಿಧಿಯಿರಬೇಕು ಅಂದನು.


ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕವಾದ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಸಮರ್ಪಿಸಿದನು.


ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.


ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ ಅದು ಅವನಿಗೆ ತಿಳಿಯದೆಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.


ಯೆಹೋವನು ಮೋಶೆಯ ಮೂಲಕ ಈ ಆಜ್ಞೆಗಳನ್ನು ಕೊಟ್ಟ ದಿನ ಮೊದಲುಗೊಂಡು ನಿಮ್ಮ ಎಲ್ಲಾ ತಲಾಂತರಗಳವರೆಗೂ ಯಾವಾಗಲಾದರೂ ಸಮೂಹದವರು ತಿಳಿಯದೆ ಇವುಗಳಲ್ಲಿ ಒಂದನ್ನು ಮೀರಿ ದೋಷಿಗಳಾದರೆ


ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾ ದ್ರೋಹಕ್ಕೆ ಒಳಗಾಗುವದಿಲ್ಲ.


ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು