Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:15 - ಕನ್ನಡ ಸತ್ಯವೇದವು J.V. (BSI)

15 ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧಪ್ರಾಯಶ್ಚಿತ್ತಕ್ಕಾಗಿ ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ಎರಡು ಅಥವಾ ಹೆಚ್ಚು ರೂಪಾಯಿ ಬಾಳುವದೆಂದು ನಿಮಗೆ ತೋರುವ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:15
33 ತಿಳಿವುಗಳ ಹೋಲಿಕೆ  

ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿಯೊಬ್ಬನು ಯೆಹೋವನಿಗೆ ಅರ್ಧ ರೂಪಾಯಿಯ ಮೇರೆಗೆ ಕಪ್ಪ ಕೊಡಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧರ್ಧ ರೂಪಾಯಿ ಕಪ್ಪವಾಗಿ ಕೊಡಬೇಕು.


ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ]


ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿ ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.


ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.


ಪ್ರಾಯಶ್ಚಿತ್ತ ಯಜ್ಞನಿಯಮಗಳು. ಆ ಯಜ್ಞವು ಮಹಾಪರಿಶುದ್ಧವಾದದ್ದು.


ಮತ್ತು ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಯಾಜಕನಿಗೆ ಒಪ್ಪಿಸಬೇಕು.


ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆದುಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.


ದಂಡವನ್ನು ತೆಗೆದುಕೊಳ್ಳತಕ್ಕವನು [ತೀರಿಹೋಗಿ] ಬಾಧ್ಯನೂ ಇಲ್ಲದ ಪಕ್ಷಕ್ಕೆ ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಅದು ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತಯಜ್ಞದ ಟಗರು ಈ ಎರಡೂ ಯಾಜಕನಿಗೆ ಆಗಬೇಕು.


ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ನಿಮಗೆ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವದು.


ಮತ್ತು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು -


ಅವರೆಲ್ಲರೂ ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ ನೈವೇದ್ಯವಾಗಿ ಅದಕ್ಕೆ ನೇವಿುತವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ದೋಷಪರಿಹಾರಕಯಜ್ಞವಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.


ನೀವು ಇಸ್ರಾಯೇಲ್‍ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ; ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿದ್ದದ್ದಕ್ಕೆ ಕಾರಣವು ಗೊತ್ತಾಗುವದು ಎಂದು ಹೇಳಿದರು.


ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಭಾಗವಾಗಿತ್ತು; ಅದು ಯೆಹೋವನ ಆಲಯಕ್ಕೆ ಸೇರಲಿಲ್ಲ.


ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.


ಒಬ್ಬನು ಆಡನ್ನಾಗಲಿ ಕುರಿಯನ್ನಾಗಲಿ ಸರ್ವಾಂಗಹೋಮ ಮಾಡಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ಆ ಟಗರುಗಳಲ್ಲಿ ಒಂದನ್ನೂ ಆ ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು; ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.


ಇಪ್ಪತ್ತು ವರುಷದಿಂದ ಅರುವತ್ತು ವರುಷದ ಪರ್ಯಂತರ ವಯಸ್ಸುಳ್ಳ ಪುರುಷನಿಗೋಸ್ಕರ ಐವತ್ತು ರೂಪಾಯಿಗಳನ್ನೂ


ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮಪಶು, ದೋಷಪರಿಹಾರಕಯಜ್ಞಪಶು, ಪ್ರಾಯಶ್ಚಿತ್ತಯಜ್ಞಪಶು ಇವುಗಳನ್ನು ವಧಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು