Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:16 - ಕನ್ನಡ ಸತ್ಯವೇದವು J.V. (BSI)

16 ಮತ್ತು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತಾವು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪರಿಹಾರಾರ್ಥವಾಗಿ ತಂದ ಟಗರಿನಿಂದ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದಾಗ ಅವರಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ವ್ಯಕ್ತಿಯೂ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮಾಡಿದ ಪಾಪಕ್ಕಾಗಿ ಈ ಬೆಲೆಯನ್ನು ತೆರಬೇಕು. ಇದಲ್ಲದೆ ಆ ಬೆಲೆಯ ಐದನೆಯ ಒಂದು ಭಾಗವನ್ನು ಸೇರಿಸಿ ಆ ಹಣವನ್ನು ಯಾಜಕನಿಗೆ ಕೊಡಬೇಕು. ಈ ರೀತಿಯಾಗಿ ಯಾಜಕನು ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವುದರ ಮೂಲಕ ಅವನನ್ನು ಶುದ್ಧಿಮಾಡುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪರಿಶುದ್ಧವಾದದ್ದಲ್ಲದೆ, ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅದಕ್ಕೆ ಐದನೆಯ ಪಾಲನ್ನು ಕೂಡಿಸಿ, ಅದನ್ನು ಯಾಜಕನಿಗೆ ಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:16
22 ತಿಳಿವುಗಳ ಹೋಲಿಕೆ  

ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.


ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅಷ್ಟನ್ನೂ ಅದರ ಐದನೆಯ ಭಾಗವನ್ನೂ ಯಾಜಕನಿಗೆ ತೆರಬೇಕು.


ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.


ಅಶುದ್ಧ ಪಶುವಿನಲ್ಲಿ ಚೊಚ್ಚಲುಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು.


ಹರಕೆಮಾಡಿದವನು ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವದು.


ಹರಕೆ ಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.


ಮತ್ತೊಂದನ್ನು ಯಥಾವಿಧಿಯಾಗಿ ಸರ್ವಾಂಗಹೋಮ ಮಾಡಿಬಿಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.


ನಿಷ್ಕಾರಣದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರ್ನಿವಿುತ್ತವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡತೆಗೆದುಕೊಂಡರಲ್ಲಾ.


ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವದು. ನೈವೇದ್ಯದ್ರವ್ಯದಲ್ಲಿ ವಿುಕ್ಕದ್ದು ಹೇಗೆ ಯಾಜಕನಿಗೆ ಆಗುತ್ತದೋ ಇದರಲ್ಲಿಯೂ ವಿುಕ್ಕದ್ದು ಯಾಜಕನಿಗೆ ಆಗಬೇಕು.


ಮತ್ತು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರಮಾಡುವನು.


ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.


ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದುಕೊಂಡು ಕೊಯಿದರೆ ಇಲ್ಲವೆ ಮಾರಿದರೆ ಅವನು ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನು, ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನು ಕೊಡಬೇಕು.


ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತ ಯಜ್ಞಪಶುವನ್ನೂ ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.


ದಂಡವನ್ನು ತೆಗೆದುಕೊಳ್ಳತಕ್ಕವನು [ತೀರಿಹೋಗಿ] ಬಾಧ್ಯನೂ ಇಲ್ಲದ ಪಕ್ಷಕ್ಕೆ ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಅದು ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತಯಜ್ಞದ ಟಗರು ಈ ಎರಡೂ ಯಾಜಕನಿಗೆ ಆಗಬೇಕು.


ನೀವು ಇಸ್ರಾಯೇಲ್‍ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ; ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿದ್ದದ್ದಕ್ಕೆ ಕಾರಣವು ಗೊತ್ತಾಗುವದು ಎಂದು ಹೇಳಿದರು.


ಅವನು [ಅಭಿಷಿಕ್ತ ಯಾಜಕನ] ದೋಷಪರಿಹಾರಕಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು