Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:7 - ಕನ್ನಡ ಸತ್ಯವೇದವು J.V. (BSI)

7 ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:7
24 ತಿಳಿವುಗಳ ಹೋಲಿಕೆ  

ಕುರಿಯನ್ನು ಕೊಡುವದಕ್ಕೆ ಗತಿಯಿಲ್ಲದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನೂ ದೋಷಪರಿಹಾರಕ್ಕಾಗಿ ಒಂದನ್ನೂ ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು.


ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು.


ದೋಷಪರಿಹಾರಕಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಒಂದನ್ನೂ ನೈವೇದ್ಯದ್ರವ್ಯವನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.


ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿಕೊಡಬೇಕಾಗಿತ್ತು.


ಇಸ್ರಾಯೇಲ್ಯರ ಜನಸಮೂಹದಿಂದ ದೋಷಪರಿಹಾರಕಯಜ್ಞಕ್ಕಾಗಿ ಎರಡು ಹೋತಗಳನ್ನೂ ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.


ಯಾಜಕನು ದೋಷಪರಿಹಾರಕಯಜ್ಞಕ್ಕಾಗಿ ಒಂದನ್ನೂ ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು.


ಮತ್ತು ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಅವರಿಗೆ - ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನಾದದರಿಂದ ನೀವು ಆತನ ಸನ್ನಿಧಿಯಲ್ಲಿ ಸಮರ್ಪಿಸುವದಕ್ಕೋಸ್ಕರ ದೋಷಪರಿಹಾರಕ್ಕಾಗಿ ಹೋತವನ್ನೂ ಸರ್ವಾಂಗಹೋಮಕ್ಕಾಗಿ ಒಂದು ವರುಷದ ಪೂರ್ಣಾಂಗವಾದ ಕರುವನ್ನೂ ಕುರಿಯನ್ನೂ


ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.


ಬಳಿಕ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿ


ಪ್ರಾಯಶ್ಚಿತ್ತ ಯಜ್ಞನಿಯಮಗಳು. ಆ ಯಜ್ಞವು ಮಹಾಪರಿಶುದ್ಧವಾದದ್ದು.


ಗಂಡುಮಗುವನ್ನು ಹೆತ್ತರೂ ಹೆಣ್ಣು ಮಗುವನ್ನು ಹೆತ್ತರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರುಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.


ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ


ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು.


ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತರಬೇಕು.


ಯಾಜಕನು ದೋಷಪರಿಹಾರಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಇನ್ನೊಂದನ್ನೂ ಸಮರ್ಪಿಸಿ ಶವಸೋಂಕಿದವನಿಗೋಸ್ಕರ ದೋಷಪರಿಹಾರಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.


ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು