Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:6 - ಕನ್ನಡ ಸತ್ಯವೇದವು J.V. (BSI)

6 ಮತ್ತು ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ಪರಿಹಾರಕ್ಕಾಗಿ, ತಮ್ಮ ಹಿಂಡಿನಿಂದ ಕಳಂಕರಹಿತವಾದ ಒಂದು ಟಗರನ್ನು ಅಥವಾ ಅದಕ್ಕೆ ಸರಿಸಮಾನವಾದುದ್ದನ್ನು ತಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದೆಯಿಂದ ತಂದ ಟಗರಾಗಿರಬೇಕು. ಟಗರಿನಲ್ಲಿ ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:6
8 ತಿಳಿವುಗಳ ಹೋಲಿಕೆ  

ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧಪ್ರಾಯಶ್ಚಿತ್ತಕ್ಕಾಗಿ ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ಎರಡು ಅಥವಾ ಹೆಚ್ಚು ರೂಪಾಯಿ ಬಾಳುವದೆಂದು ನಿಮಗೆ ತೋರುವ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು.


ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ನಿಮಗೆ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವದು.


ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.


ಆ ಟಗರುಗಳಲ್ಲಿ ಒಂದನ್ನೂ ಆ ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು; ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.


ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿ ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.


ನಮ್ಮ ಭೂವಿುಯ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿವರುಷವೂ ಯೆಹೋವನ ಆಲಯಕ್ಕೆ ತಂದುಕೊಡುವೆವು;


ಬಡಗಲಿಗೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ; ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು