Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:18 - ಕನ್ನಡ ಸತ್ಯವೇದವು J.V. (BSI)

18 ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವೇ ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವದಿಲ್ಲ. ಅದು ಹೇಯವಾದದ್ದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ಬಲಿಪ್ರಾಣಿಯ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದ್ದೇ ಆದರೆ ಆ ಬಲಿ ಸ್ವೀಕೃತವಾಗುವುದಿಲ್ಲ. ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರಕುವುದಿಲ್ಲ. ಅದು ಹೇಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಬ್ಬನು ತನ್ನ ಸಮಾಧಾನಯಜ್ಞದಲ್ಲಿ ಉಳಿದದ್ದನ್ನು ಮೂರನೆಯ ದಿನದಲ್ಲಿ ತಿಂದರೆ, ಯೆಹೋವನು ಅವನ ವಿಷಯದಲ್ಲಿ ಸಂತೋಷಗೊಳ್ಳುವುದಿಲ್ಲ. ಯೆಹೋವನು ಆ ಯಜ್ಞವನ್ನು ಅವನ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆ ಯಜ್ಞವು ಅಸಹ್ಯವಸ್ತುವಾಗುವುದು. ಆ ಮಾಂಸವನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:18
31 ತಿಳಿವುಗಳ ಹೋಲಿಕೆ  

ನೀವು ಹೀಗೆ ಸಮರ್ಪಿಸಿದ ಹತ್ತನೆಯ ಪಾಲು ಕಣದಲ್ಲಿನ ದವಸವನ್ನೂ ದ್ರಾಕ್ಷೇತೊಟ್ಟಿಯ ರಸವನ್ನೂ ಕೊಟ್ಟಂತೆ ನಿಮ್ಮ ಲೆಕ್ಕದಲ್ಲಿ ಎಣಿಸಲ್ಪಡುವದು.


ಅನ್ಯದೇಶದವನಿಂದ ತೆಗೆದುಕೊಂಡು ಅಂಥ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದದ್ದಲ್ಲ; ಆದಕಾರಣ ಸಮರ್ಪಕವಾಗುವದಿಲ್ಲ.


ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳೆಲ್ಲಾ ಹೇಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ನೀವು ನನಗೆ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸೆನು; ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನೋಡೆನು.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳಿಗೆ ಮೆಚ್ಚನು; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವದು.


ಪಾಪಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು, ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಇವರು ಉಪವಾಸ ಮಾಡುವಾಗ ಇವರ ಮೊರೆಯನ್ನು ಕೇಳೆನು; ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು; ಖಡ್ಗ ಕ್ಷಾಮ ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು ಎಂದು ಹೇಳಿದನು.


ಯೆಹೋವನು ಈ ಜನರನ್ನು ಕುರಿತು - ಇವರು [ನನ್ನನ್ನು ಪ್ರಯಾಣಿಕನು ಎಂದ] ಹಾಗೆಯೇ ಅಲೆಯುವದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ; ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು ಎಂದು ಹೇಳಿದ್ದಾನೆ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಗುಪ್ತಸ್ಥಳಗಳಲ್ಲಿ ರಾತ್ರಿಕಳೆಯುತ್ತಾ ಹಂದಿಯ ಬಾಡು ತಿನ್ನುತ್ತಾ ಅಸಹ್ಯಪದಾರ್ಥಗಳ ಸಾರನ್ನು ತಮ್ಮ ಗಂಗಳಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರು,


ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಕವಾಗುವದಿಲ್ಲ.


ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದಾರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗವಿುಸಿದವನಾದದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.


ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗವಿುಸಿದದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆಯೂ ಸ್ನಾನಮಾಡದೆಯೂ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಅದಕ್ಕೆ ಆರೋನನು ಮೋಶೆಗೆ - ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನಿಗೆ ಒಳ್ಳೇದಾಗಿ ತೋಚುತ್ತಿತ್ತೋ ಎಂದು ಉತ್ತರಕೊಡಲಾಗಿ


ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ; ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?


ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ ಅದು ಅವನಿಗೆ ತಿಳಿಯದೆಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.


ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ [ಯಜ್ಞಪಶುವಿನ] ಮಾಂಸವನ್ನು ತಿನ್ನಬಹುದು.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು