Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:21 - ಕನ್ನಡ ಸತ್ಯವೇದವು J.V. (BSI)

21 ಯಾವನಿಗಾದರೂ ಮನುಷ್ಯ ದೇಹದಿಂದುಂಟಾದ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧವಸ್ತು ಇವುಗಳಲ್ಲಿ ಯಾವದಾದರೂ ಸೋಂಕಿದರೆ ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಯಾರಾದರು ಅಶುದ್ಧರಾಗಿದ್ದು ಸರ್ವೇಶ್ವರನಿಗೆ ಸಮರ್ಪಿತವಾದ ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸವನ್ನು ತಿಂದರೆ ಅಂಥವರನ್ನು ತಮ್ಮ ಕುಲದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧ ವಸ್ತುವನ್ನೇ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧವಸ್ತುವನ್ನಾಗಲಿ ಮುಟ್ಟಿದರೆ ಮತ್ತು ಯೆಹೋವ ದೇವರಿಗೆ ಸಂಬಂಧಿಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:21
31 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ. ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಅರಿಕೆಮಾಡಲು


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ -


ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿವಿುಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.


ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಕೂಡದು; ಅದು ನಿಮಗೆ ಅಶುದ್ಧ.


ನಿಷಿದ್ಧವಾಗಿರುವ ಯಾವದನ್ನೂ ನೀವು ತಿನ್ನಕೂಡದು.


ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಉಣ್ಣಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದದ್ದನ್ನು ಮುಟ್ಟಿದವನಾಗಲಿ ವೀರ್ಯಸ್ಖಲನ ಮಾಡಿಕೊಂಡವನಾಗಲಿ


ಯಾವನಾದರೂ ಈ ಹೇಸಿಗೆಯಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.


ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲ್ಯರಿಗೆ - ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.


ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ರಕ್ತಭೋಜನಮಾಡಿದವನು ಕುಲದಿಂದ ತೆಗೆದುಹಾಕಲ್ಪಡಬೇಕು.


ಮನುಷ್ಯನು ಯೆಹೋವನಿಗೆ ಹೋಮಮಾಡುವಂಥ ಪಶುಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.


ಯಾವನಾದರೂ ಅಶುದ್ಧನಾಗಿದ್ದು ಯೆಹೋವನಿಗೆ ಸಮರ್ಪಿತವಾದ ಸಮಾಧಾನಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಆ ಏಳು ದಿನಗಳೂ ನಿಮ್ಮ ಮನೆಗಳಲ್ಲಿ ಹುಳಿಯಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಲಿ ಸ್ವದೇಶದವನಾಗಲಿ ಇಸ್ರಾಯೇಲ್ ಜನರೊಳಗಿಂದ ತೆಗೆದುಹಾಕಲ್ಪಡಬೇಕು.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಮೀರಿದವನಾದ ಕಾರಣ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳಿದನು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲ್ಯರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆಯಲ್ಪಡಬೇಕು; ನಾನು ಯೆಹೋವನು.


ಅಶುದ್ಧನಿಗೆ ಸೋಂಕಿದ ವಸ್ತು ಯಾವದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು; ಅದು ಯಾರಿಗೆ ಸೋಂಕಿತೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.


ಆ ದಿವಸ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.


ಅದರಲ್ಲಿ ಏನಾದರೂ ತಿಂದವನು ಯೆಹೋವನ ದ್ರವ್ಯವನ್ನು ಹೊಲೆಮಾಡಿದವನಾದದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.


ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನು ಕುಲದಿಂದ ತೆಗೆದು ಹಾಕಲ್ಪಡಬೇಕು.


ಆದದರಿಂದ ನೀನು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ, ಬೊಂಬೆಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು