Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಹೇಳಿದಂತೆಯೇ ಮೋಶೆ ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಕೂಡಿದಾಗ ಮೋಶೆ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಹೇಳಿದಂತೆಯೇ ಮೋಶೆ ಮಾಡಿದನು. ಜನರೆಲ್ಲರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಆಜ್ಞಾಪಿಸಿದ್ದನ್ನು ಮೋಶೆ ಮಾಡಿದನು. ಜನರು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಲ್ಲಿ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆಯೇ ಮಾಡಿದನು. ಸಭೆಯು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:4
19 ತಿಳಿವುಗಳ ಹೋಲಿಕೆ  

ನಾನು ನಿಮಗೆ ತಿಳಿಸಿದ ಮೊದಲನೆಯ ಸಂಗತಿಗಳೊಳಗೆ ಒಂದು ಸಂಗತಿಯನ್ನು ನಿಮಗೆ ತಿಳಿಸಿಕೊಟ್ಟೆನು. ಅದು ನಾನು ಸಹ ಕಲಿತುಕೊಂಡದ್ದೇ. ಅದೇನಂದರೆ ಶಾಸ್ತ್ರದಲ್ಲಿ ಮುಂತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ - ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು -


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಆದದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ; ಹೀಗೆಯೇ ನನಗೆ ಅಪ್ಪಣೆಯಾಯಿತು.


ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.


ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ವಿುಕ್ಕದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನೂ ಮಾಂಸವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.


ಆಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟುಗಳನ್ನು ಸುತ್ತಿ ಮುಂಡಾಸಗಳನ್ನು ಇಟ್ಟನು.


ಅವನ ತಲೆಗೆ ಮುಂಡಾಸವನ್ನು ಇಟ್ಟು ಅದರ ಮುಂಭಾಗದಲ್ಲಿ ಬಂಗಾರದ ಪಟ್ಟವನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧ ಕಿರೀಟವು.


ಹುರಿನಾರಿನಿಂದ ಚಡ್ಡಿಗಳನ್ನೂ ಹುರಿನಾರಿನಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಬುಟೇದಾರೀ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ಚಿನ್ನದ ಗೆಜ್ಜೆಯೂ ದಾಳಿಂಬದಂತಿರುವ ಚಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.


ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದನು.


ಆ ಎರಡು ರತ್ನಗಳು ಇಸ್ರಾಯೇಲ್ಯರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಅವುಗಳನ್ನು ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು. ಯೆಹೋವನು ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದನು.


ಕವಚದ ಮೇಲಿರುವ ವಿಚಿತ್ರವಾದ ಬುಟೇದಾರಿಯ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಉಂಟಾಗಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಆರೋನನಿಗೆ ದೀಕ್ಷಾವಸ್ತ್ರಗಳನ್ನೂ ಮಾಡಿದರು.


ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಕರಿಸು ಎಂದು ಆಜ್ಞಾಪಿಸಲಾಗಿ


ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು