Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:10 - ಕನ್ನಡ ಸತ್ಯವೇದವು J.V. (BSI)

10 ಆ ದೋಷಪರಿಹಾರಕಯಜ್ಞಪಶುವಿನ ಕೊಬ್ಬನ್ನೂ ಹುರುಳಿಕಾಯಿಗಳನ್ನೂ ಕಾಳಿಜದ ಹತ್ತಿರವಿರುವ ಕೊಬ್ಬನ್ನೂ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೋಷಪರಿಹಾರಕ ಬಲಿಪ್ರಾಣಿಯ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಾಳಿಜದ ಹತ್ತಿರವಿರುವ ಕೊಬ್ಬನ್ನು, ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ, ಬಲಿಪೀಠದ ಮೇಲೆ ಹೋಮಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆರೋನನು ಪಾಪಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು ಮತ್ತು ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನು ತೆಗೆದುಕೊಂಡನು. ಅವನು ಆ ವಸ್ತುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದರ ಪಾಪ ಪರಿಹಾರದ ಬಲಿಯ ಕೊಬ್ಬು, ಮೂತ್ರಪಿಂಡಗಳು ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬು, ಇವುಗಳನ್ನು ಅವನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ, ಬಲಿಪೀಠದ ಮೇಲೆ ಸುಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:10
13 ತಿಳಿವುಗಳ ಹೋಲಿಕೆ  

ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ಕಂದಾ, ನನ್ನ ಕಡೆಗೆ ಮನಸ್ಸುಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.


ಅದರ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು.


ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯಿದುಬಿಟ್ಟನು.


ಅದರ ಮಾಂಸವನ್ನೂ ಚರ್ಮವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು