Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:22 - ಕನ್ನಡ ಸತ್ಯವೇದವು J.V. (BSI)

22 ಆರೋನನು ಆ ದೋಷಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆರೋನನು ಆ ದೋಷಪರಿಹಾರಕ ಬಲಿಯನ್ನೂ ದಹನಬಲಿಯನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆಮೇಲೆ ಬಲಿಪೀಠದಿಂದ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತರುವಾಯ ಆರೋನನು ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆರೋನನು ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿ ಮುಗಿಸಿದ ನಂತರ ಯಜ್ಞವೇದಿಕೆಯಿಂದ ಕೆಳಗಿಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಮತ್ತು ಸಮಾಧಾನದ ಬಲಿಯನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:22
16 ತಿಳಿವುಗಳ ಹೋಲಿಕೆ  

ಮತ್ತು ಆತನು ಅವರನ್ನು ಬೇಥಾನ್ಯದ ತನಕ ಕರಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರವಿರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಆದುಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.


ಅವುಗಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಇದಾದ ಮೇಲೆ ಅರಸನು ಎದ್ದು ನಿಂತಿದ್ದ ಇಸ್ರಾಯೇಲ್ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ -


ಅಮ್ರಾಮನ ಮಕ್ಕಳು - ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ ಸೇವಿಸುವವರೂ ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರತಕ್ಕದ್ದು.


ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ -


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳುಕೊಂಡು ಅವರನ್ನು ಆಶೀರ್ವದಿಸಿದನು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು