Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:25 - ಕನ್ನಡ ಸತ್ಯವೇದವು J.V. (BSI)

25 ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತ್ಯಾ ಅಮ್ಕಾ ರಾಕ್ತಲ್ಯಾ ಎಕ್ಲ್ಯಾಚ್ ದೆವಾಕ್, ಜೆಜು ಕ್ರಿಸ್ತಾ ಅಮ್ಚ್ಯಾ ಧನಿಯಾಚ್ಯಾ ವೈನಾ ಮಹಿಮಾ, ವೈಭವ್, ರಾಜ್ವಟ್ಕಿ ಅನಿ ಅಧಿಕಾರ್ , ಅದ್ದಿ, ಅತ್ತಾ ಅನಿ ಸದಾ ಸರ್ವತಾಕ್ ತೆಕಾಚ್ ರ್‍ಹಾಂವ್ದಿತ್, ಆಮೆನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:25
32 ತಿಳಿವುಗಳ ಹೋಲಿಕೆ  

ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ?


ಸಮಸ್ತವು ಆತನಿಂದ ಉತ್ಪತ್ತಿಯಾಗಿ ಆತನಿಂದ ನಡೆಯುತ್ತಾ ಆತನಿಗಾಗಿ ಇರುತ್ತದೆ; ಆತನಿಗೇ ಸದಾಕಾಲವೂ ಸ್ತೋತ್ರ. ಆಮೆನ್.


ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.


ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.


ನಮ್ಮ ಕರ್ತನು ದೊಡ್ಡವನೂ ಪರಾಕ್ರವಿುಯೂ ಆಗಿದ್ದಾನೆ; ಆತನ ಜ್ಞಾನವು ಅಪರಿವಿುತವಾಗಿದೆ.


ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.


ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಯೆಹೋವಾ, ಮಹಿಮಪ್ರತಾಪ ವೈಭವ ಪರಾಕ್ರಮಪ್ರಭಾವಗಳು ನಿನ್ನವು; ಭೂಮ್ಯಾಕಾಶಗಳಲ್ಲಿರುವದೆಲ್ಲಾ ನಿನ್ನದೇ. ಯೆಹೋವನೇ, ರಾಜ್ಯವು ನಿನ್ನದು; ನೀನು ಮಹೋನ್ನತನಾಗಿ ಸರ್ವವನ್ನೂ ಆಳುವವನಾಗಿರುತ್ತೀ.


ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. ಆಮೆನ್.


ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ. ಆದದರಿಂದ ನಾವು ಅರಿತಿರುವದನ್ನೇ ಆರಾಧಿಸುವವರಾಗಿದ್ದೇವೆ; ನೀವು ಅರಿಯದೆ ಇರುವಂಥದನ್ನು ಆರಾಧಿಸುವವರು.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಜನೋಪಕಾರವೂ ಪ್ರತ್ಯಕ್ಷವಾದಾಗ


ಎದುರುಮಾತನ್ನಾಡದೆ ಯಾವದನ್ನೂ ಕದ್ದಿಟ್ಟುಕೊಳ್ಳದೆ ಪೂರಾ ನಂಬಿಗಸ್ತರೆಂದು ಹೆಸರುಹೊಂದಿ ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಅಲಂಕಾರವಾಗಿರಬೇಕೆಂದು ಬೋಧಿಸು.


ಹಾಗೆ ಮಾಡುವದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಮೆಚ್ಚಿಕೆಯಾಗಿಯೂ ಯೋಗ್ಯವಾಗಿಯೂ ಅದೆ.


ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.


ಆತನು ರಹಸ್ಯವಾದ ತನ್ನ ಸಂಕಲ್ಪವನ್ನು ನಮಗೆ ತಿಳಿಯಪಡಿಸುವದರ ಮೂಲಕ ವಿಶೇಷವಾದ ಜ್ಞಾನವನ್ನೂ ಬುದ್ಧಿಯನ್ನೂ ಕೊಟ್ಟು ಆ ಕೃಪೆಯನ್ನು ಇನ್ನೂ ಹೆಚ್ಚಾಗಿ ನಮಗೆ ತೋರಿಸಿದ್ದಾನೆ.


ಯೆಹೋವನೇ, ನಿನ್ನ ಕೈಕೆಲಸಗಳು ಎಷ್ಟೋ ವಿಧವಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿದ್ದೀ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಬಂಡೆಯನ್ನು ಹೊಡೆದು ನೀರು ಚಿವ್ಮಿು ಹೊರಗೆ ಬರುವಂತೆಯೂ ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನೂ ಕೊಡಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ ಎಂಬದೇ.


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ನನ್ನ ಆತ್ಮವು ನನ್ನ ರಕ್ಷಕನಾದ ದೇವರ ವಿಷಯದಲ್ಲಿ ಉಲ್ಲಾಸಗೊಂಡದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು