ಯೂದನು 1:3 - ಕನ್ನಡ ಸತ್ಯವೇದವು J.V. (BSI)3 ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಾಜ್ಯಾ ಪ್ರೆಮಾಚ್ಯಾನು, ಅಮಿ ಸಗ್ಳೆ ವಾಟುನ್ ಘೆಟಲ್ಲ್ಯಾ ಸುಟ್ಕೆಚ್ಯಾ ವಿಶಯಾತ್ ತುಮ್ಕಾ ಲಿವ್ಚೆ ಮನುನ್ ಮಿಯಾ ಉಮ್ಮೆದಿನ್ ತಯಾರಿ ಕರ್ತಾನಾ, ಸಗ್ಳ್ಯಾ ದೆವಾಚ್ಯಾ ಲೊಕಾಕ್ನಿ ಲೈ ತರಾಸಾನ್ ಎಗ್ದಾಚ್ ದಿಲ್ಲ್ಯಾ ವಿಶ್ವಾಸಾಚ್ಯಾ ವಿಶಯಾತ್ ತುಮ್ಚ್ಯಾಕ್ಡೆ ವಿನಂತಿ ಕರ್ತಲೆ ಗರ್ಜೆಚೆ ಮನುನ್ ಮಾಕಾ ದಿಸ್ಲೆ. ಅಧ್ಯಾಯವನ್ನು ನೋಡಿ |
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.