Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:1 - ಕನ್ನಡ ಸತ್ಯವೇದವು J.V. (BSI)

1 ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕವರ್ಗದವನೂ ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇವು ಯೆರೆಮೀಯನ ಪ್ರವಚನಗಳು. ಈತ ಬೆನ್ಯಮೀನ್ ಪ್ರಾಂತ್ಯಕ್ಕೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನು. ಇವನ ತಂದೆ ಹಿಲ್ಕೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಬುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಬಕ್ಕೆ ಸೇರಿದವನಾಗಿದ್ದನು. ಆ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:1
23 ತಿಳಿವುಗಳ ಹೋಲಿಕೆ  

ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ ಯಾಜಕನೂ ಆದ ಯೆಹೆಜ್ಕೇಲನಿಗೆ ಸಾಕ್ಷಾತ್ತಾಗಿ ಒದಗಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.)


ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ - ನಮ್ಮ ಕೈಯಿಂದ ನೀನು ಸಾಯಬಾರದಾಗಿದ್ದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ -


ಈ ಪ್ರಕಾರ ಯೆಹೋವನು ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿ ದೇಶವು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವದಕ್ಕೆ ಮಾರ್ಗವಾಯಿತು. ದೇಶವು ಎಪ್ಪತ್ತು ವರುಷ ಹಾಳುಬಿದ್ದು ಆ ಕಾಲದಲ್ಲೆಲ್ಲಾ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.


ಬೆನ್ಯಾಮೀನ್ ಕುಲದಿಂದ ಗೆಬ, ಆಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಪಟ್ಟಣಗಳು ಹದಿಮೂರು.


ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ - ಆಮೋಸನು ಇಸ್ರಾಯೇಲ್ಯರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚುಮಾಡಿದ್ದಾನೆ; ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು;


ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕಂಡುಬಂದ ದೈವೋಕ್ತಿಗಳು.


ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇವಿುನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಯೆಹೂದದ ಮತ್ತು ಯೆರೂಸಲೇವಿುನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ -


ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಆ ಕಾಲದಲ್ಲಿ ನೆರವೇರಿತು; ಅದೇನಂದರೆ -


ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ, ಬೇರೆ ಕೆಲವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.


ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು, ಅದೇನಂದರೆ - ಅವರು ಆ ಮೂವತ್ತು ರೂಪಾಯಿ ತೆಗೆದುಕೊಂಡು


ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ - ನೀನು ಅಣತೋತಿನಲ್ಲಿರುವ ನಿನ್ನ ಸ್ವಾಸ್ತ್ಯಕ್ಕೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದದರಿಂದ


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತಗಳನ್ನು ಹಾಡುವದು ಇಸ್ರಾಯೇಲ್ಯರಲ್ಲಿ ಒಂದು ಪದ್ಧತಿಯಾಯಿತು.


ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಯೆಹೋವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.


ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -


ಸೌಲನ ಗಿಬೆಯ ಓಡಿಹೋಯಿತು; ಗಲ್ಲೀಮ್ ಗ್ರಾಮವೇ, ಕೂಗಿ ಕಿರಚಿಕೋ! ಲಯೆಷವೇ, ಕಿವಿಗೊಡು!


ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?


ದಾನಿಯೇಲನಾದ ನಾನು ಶಾಸ್ತ್ರಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮು ಹಾಳುಬಿದ್ದಿರಬೇಕಾದ ಪೂರ್ಣಕಾಲದ ವರುಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದು


ಅನಾತೋತ್ ಊರಿನವರು 128


ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ತನಗೆ ಬರಬೇಕಾದ ಸ್ವಾಸ್ತ್ಯವನ್ನು ಜನರ ಸಮಕ್ಷಮ ತೆಗೆದುಕೊಳ್ಳಲು ಯೆರೂಸಲೇವಿುನಿಂದ ಅಲ್ಲಿಗೆ ಹೊರಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು