Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:25 - ಕನ್ನಡ ಸತ್ಯವೇದವು J.V. (BSI)

25 ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:25
28 ತಿಳಿವುಗಳ ಹೋಲಿಕೆ  

ವೈರಿಯ ಕುದುರೆಗಳ ಬುಸುಗಾಟವು ದಾನಿನಿಂದ ಕೇಳಬರುತ್ತದೆ; ತುರಂಗಗಳ ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ; ಶತ್ರುಗಳು ಬಂದರು, ಸೀಮೆಯನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು.


ದುಷ್ಟತ್ವವನ್ನು ನಡಿಸುವವರೆಲ್ಲರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವದಿಲ್ಲ.


ಕೆಡುಕರ ನಿವಾಸಗಳ ಅವಸ್ಥೆಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಸರಿ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ.


ಯೆಹೋವನನ್ನು ಆಶ್ರಯಿಸದೆ ಯೆಹೋವನ ದರ್ಶನವನ್ನು ಬಯಸದೆ ಯೆಹೋವನ ಮಾರ್ಗಬಿಟ್ಟವರನ್ನೂ ಧ್ವಂಸಪಡಿಸುವೆನು.


ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು - ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ನ್ಯಾಯನಿವಾಸವೆನಿಸಿಕೊಂಡ ಯೆಹೋವನಿಗೆ, ಹೌದು, ತಮ್ಮ ಪಿತೃಗಳ ನಿರೀಕ್ಷೆಯಾದ ಯೆಹೋವನಿಗೆ ಪಾಪಮಾಡಿದರಲ್ಲಾ ಅಂದುಕೊಂಡರು.


ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು ತಾವೇ ನೆಲಕ್ಕೆ ಬಿದ್ದುಹೋದರು.


ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.


ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ.


ನೀತಿಸ್ವರೂಪನಾದ ತಂದೆಯೇ, ಲೋಕವಂತೂ ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ; ಮತ್ತು ಇವರು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ತಿಳುಕೊಂಡಿದ್ದಾರೆ.


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದೀಯಲ್ಲಾ.


ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದೀ.


ಆಗ ಪವಿತ್ರಸ್ಥಾನದಿಂದ ಬಂದ ಮಹಾ ಶಬ್ದವನ್ನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ - ನೀವು ಹೋಗಿ ಆ ಏಳು ಪಾತ್ರೆಗಳಲ್ಲಿರುವ ದೇವರ ರೌದ್ರವನ್ನು ಭೂವಿುಯ ಮೇಲೆ ಹೊಯ್ಯಿರಿ ಎಂದು ಹೇಳಿತು.


ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; ನಿನ್ನ ಕೋಪಾಗ್ನಿಯು ಅವರನ್ನು ಆಹುತಿಗೊಳ್ಳಲಿ.


ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ; ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯಾಹುವಿಗೆ ಸ್ತೋತ್ರ!


ಇವರು ಇಸ್ರಾಯೇಲ್ಯರನ್ನು ಬಾಯಿತೆರೆದು ನುಂಗಿದ್ದಾರೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -


ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳೆಲ್ಲಾ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು, ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು