Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:13 - ಕನ್ನಡ ಸತ್ಯವೇದವು J.V. (BSI)

13 ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು; ಯೆರೂಸಲೇವಿುನ ಬೀದಿಗಳೆಷ್ಟೋ ತುಚ್ಫದೇವತೆಯಾದ ಬಾಳನಿಗೆ ಹೋಮಮಾಡುವದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಲೈ ಯೆಹೂದ ಜನರೇ, ನಿಮಗೆ ಎಷ್ಟು ನಗರಗಳಿವೆಯೋ ಅಷ್ಟೂ ದೇವರುಗಳಿದ್ದಾರೆ. ಜೆರುಸಲೇಮಿನಲ್ಲಿ ಹಾದಿಬೀದಿಗಳು ಎಷ್ಟಿವೆಯೋ ಅಷ್ಟೂ ಬಲಿಪೀಠಗಳಿವೆ, ಆ ತುಚ್ಛ ದೇವತೆ ಬಾಳನಿಗೆ ಧೂಪಾರತಿಯೆತ್ತಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಬಲಿಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಬಲಿಪೀಠಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:13
24 ತಿಳಿವುಗಳ ಹೋಲಿಕೆ  

ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ನಿನ್ನನ್ನುದ್ಧರಿಸಲು ಶಕ್ತರಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು.


ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯವಿಗ್ರಹಗಳಿಗೋಸ್ಕರ ಯೆರೂಸಲೇವಿುನ ಎದುರಿನಲ್ಲಿಯೂ ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.


ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.


ತಮ್ಮ ಗಂಡು ಹೆಣ್ಣುಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿಕೊಡುವದಕ್ಕೆ ಬೆನ್‍ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ.


ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿಕೊಡುವದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ; ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ. ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ;


ನೀವು ಕಳವು ಕೊಲೆ ಹಾದರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ ಬಾಳನಿಗೆ ಹೋಮವನ್ನರ್ಪಿಸಿ ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ


ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡು ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.


ಇವರ ದೇಶವು ವಿಗ್ರಹಗಳಿಂದಲೂ ತುಂಬಿದೆ, ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡದ್ದರಿಂದ ನಿನ್ನನ್ನು ನಾಟಿದ ಸೇನಾಧೀಶ್ವರನಾದ ಯೆಹೋವನು ನಿನಗೆ ಕೆಡುಕಾಗಲಿ ಎಂದು ಶಪಿಸಿದ್ದಾನೆ.


ಈ ಜನರು ನನ್ನನ್ನು ತೊರೆದು ತಮಗಾಗಲಿ ತಮ್ಮ ಪಿತೃಗಳಿಗಾಗಲಿ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ ಈ ಸ್ಥಳವನ್ನು ಅನ್ಯಸ್ಥಾನವಾಗಿ ಮಾಡಿ


ನೀವು, ನಿಮ್ಮ ಪಿತೃಗಳು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?


ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲ ಮಾಡುವೆನು. ಇದು ಯೆಹೋವನ ನುಡಿ.


ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ದಿಬ್ಬವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿದ್ದೀ.


ಕಾಡಿನಲ್ಲಿ ದ್ರಾಕ್ಷೆಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ಕಂಡೆನು; ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್‍ದೇವತೆಯ ಭಕ್ತರಾಗಿ ದೀಕ್ಷೆಗೊಂಡು ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ಅನ್ಯದೇವತೆಗಳಿಗೆ ಧೂಪಹಾಕುವದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಯೆಹೋವನನ್ನು ರೇಗಿಸಿದನು.


ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ; ನಮ್ಮ ದೇವರಾದ ಯೆಹೋವನಿಗೆ ನಾವೂ ನಮ್ಮ ಪಿತೃಗಳೂ ನಮ್ಮ ಚಿಕ್ಕತನದಿಂದ ಈಗಿನವರೆಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ ಎಂದು ಮೊರೆಯಿಡುತ್ತಾರೆ.


ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ; ಅವರ ಹೃದಯದ ಹಲಗೆಯಲ್ಲಿಯೂ ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ಅನ್ಯದೇವತೆಗಳಿಗೆ ಧೂಪಹಾಕುವದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.


ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು